ಮನೆ ರಾಜ್ಯ ಅತಂತ್ರ ಫಲಿತಾಂಶ ಬಂದರೆ ಸಿಎಂ ಆಗುತ್ತೇನೆ ಎಂದು ಒಬ್ಬರು ಕಾದು ಕುಳಿತಿದ್ದಾರೆ:ಸಂಸದೆ ಸುಮಲತಾ

ಅತಂತ್ರ ಫಲಿತಾಂಶ ಬಂದರೆ ಸಿಎಂ ಆಗುತ್ತೇನೆ ಎಂದು ಒಬ್ಬರು ಕಾದು ಕುಳಿತಿದ್ದಾರೆ:ಸಂಸದೆ ಸುಮಲತಾ

0

ಮಂಡ್ಯ:ಈ ಬಾರಿ ವಿಧಾನಸಭೆಯಲ್ಲಿ ಅತಂತ್ರ ಫಲಿತಾಂಶ ಬರಲಿ,ಆಗ ತಾವು ಸಿಎಂ ಆಗಬಹುದು ಎಂದು ಒಬ್ಬರು ಕಾದು ಕುಳಿತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಪರೋಕ್ಷವಾಗಿ ಟೀಕಿಸಿದ್ದಾರೆ.

Join Our Whatsapp Group


ಬುಧವಾರ ಮಂಡ್ಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನೇ ಸಿಎಂ ಆಗಬೇಕು ಅಂತ ಒಬ್ಬರು ಕನಸನ್ನು ಕಾಣುತ್ತಿದ್ದಾರೆ, ಆ ಒಂದೇ ಕುಟುಂಬದ ಸುತ್ತ ಅಧಿಕಾರ ಸುತ್ತುತ್ತಿರಬೇಕು ಎಂದು ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಳೆದ ವಿಧಾನಸಭೆ ಚುನಾವಣೆ
ಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಾಲಾದರೂ,ಮೂವರು ಸಚಿವರುಗಳು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಆದರೂ ಜಿಲ್ಲೆಗೆ ಅವರ ಕೊಡುಗೆಗಳು ಶೂನ್ಯ.
ಮೈಶುಗರ್ ಫ್ಯಾಕ್ಟರಿ ಸಮಸ್ಯೆ ನಾನು ಸಂಸದೆಯಾದ ನಂತರ ನನ್ನ ಪ್ರಯತ್ನದಿಂದ ಬಗೆಹರಿಯಿತು ಎಂದರು.ಮಂಡ್ಯದಲ್ಲಿ ಬದಲಾವಣೆ ಬೇಕಿದೆ.ಈ ಭಾಗದ ಜೆಡಿಎಸ್ ಶಾಸಕರು ಯಾವ ಕೆಲಸ ಮಾಡಿದ್ದಾರೆ ಒಂದನ್ನ ತೋರಿಸಿ ಎಂದರು
ಈ ಹಿಂದೆ ಉತ್ತರಪ್ರದೇಶ ಗೂಂಡಾ ರಾಜ್ಯ ಎಂದು ಕುಖ್ಯಾತಿಯಾಗಿತ್ತು.
ಯೋಗಿಯವರು ಬಂದ ಮೇಲೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಜನ ತಾವು ಸಂಪಾದಿಸಿದ ಹಣವನ್ನು ರೌಡಿಗಳಿಗೆ ಹಫ್ತಾ ನೀಡಬೇಕಿತ್ತು. ಯೋಗಿ ಸರ್ಕಾರ ಬಂದ ಮೇಲೆ ರೌಡಿಗಳು ಓಡಿ ಹೋಗಿದ್ದಾರೆ. ಉತ್ತರ ಪ್ರದೇಶದಲ್ಲಿ ಜನರು ಈಗ ನಿರ್ಭಯವಾಗಿ ಒಡಾಡುತ್ತಿದ್ದಾರೆ, ಕರ್ನಾಟಕದಲ್ಲಿಯೂ ಅಬಿವೃದ್ಧಿಪರ ಕೆಲಸವಾಗಬೇಕೆಂದರೆ ಬಿಜೆಪಿಗೆ ಮತ ನೀಡಿ, ಮಂಡ್ಯದಲ್ಲಿ ಕಮಲ ಚಿಹ್ನೆಗೆ ಈ ಬಾರಿ ನಿಮ್ಮ ಮತಗಳನ್ನು ಹಾಕಿ ಎಂದು ಸಂಸದೆ ಸುಮಲತಾ ಅಂಬರೀಷ್ ಮತದಾರರಿಗೆ ಮನವಿ ಮಾಡಿಕೊಂಡರು.