ಮೋದಿ ಉಪನಾಮ ಕುರಿತ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತನ್ನನ್ನು ದೋಷಿ ಎಂದು ಅಪರಾಧ ನಿರ್ಣಯ ಮಾಡಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಬುಧವಾರ ಹಿಂದೆ ಸರಿದಿದ್ದಾರೆ .
[ರಾಹುಲ್ ಗಾಂಧಿ ಮತ್ತು ಪೂರ್ಣೇಶ್ ಮೋದಿ ನಡುವಣ ಪ್ರಕರಣ].
ನ್ಯಾ. ಗೀತಾ ಗೋಪಿ ಅವರಿದ್ದ ಏಕಸದಸ್ಯ ಪೀಠದೆದುರು ರಾಹುಲ್ ಅವರ ಮನವಿ ಪ್ರಸ್ತಾಪಿಸಲಾಯಿತು. ಆಗ ತಮ್ಮ ಮುಂದೆ ಅರ್ಜಿ ಪ್ರಸ್ತಾಪಿಸದಂತೆ ನ್ಯಾಯಮೂರ್ತಿಗಳು ಸೂಚಿಸಿದರು. ಮತ್ತೊಂದು ಪೀಠವನ್ನು ನಿಯೋಜಿಸುವ ಅಧಿಕಾರವುಳ್ಳ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅವರನ್ನು ಕೋರುವಂತೆ ಹೇಳಿದರು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಮ್ಮನ್ನು ದೋಷಿ ಎಂದು ಮಾಡಿರುವ ಅಪರಾಧ ನಿರ್ಣಯವನ್ನು ಅಮಾನತುಗೊಳಿಸುವಂತೆ ಕೋರಿ ರಾಹುಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸೂರತ್ನ ಸೆಷನ್ಸ್ ನ್ಯಾಯಾಲಯ ಏಪ್ರಿಲ್ 20 ರಂದು ವಜಾಗೊಳಿಸಿತ್ತು.
“ಸಂಸತ್ ಸದಸ್ಯತ್ವದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿರುವುದರಿಂದ ಅವರಿಗೆ ಯಾವುದೇ ಎದುರಿಸಲಾಗದಂತಹ ಅಥವಾ ತುಂಬಿಕೊಡಲಾಗದಂತಹ ನಷ್ಟ ಅಥವಾ ಧಕ್ಕೆ ಒದಗಿದೆ ಎಂದು ಹೇಳಲಾಗದು” ಎಂದು ಸೆಷನ್ಸ್ ನ್ಯಾಯಾಲಯ ತನ್ನ ವಿಸ್ತೃತ ಆದೇಶದಲ್ಲಿ ಹೇಳಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.