ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಕ್ತದಲ್ಲಿ ಬರೆದುಕೊಡುವ ಅವಶ್ಯಕತೆ ಇಲ್ಲ. 150 ಸ್ಥಾನ ಯಾರಿಗೆ ನೀಡಬೇಕು ಎಂಬುದು ಜನ ನಿರ್ಧಾರ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ. ಚುನಾವಣೆ ಬಳಿಕ ಯಾವುದು ಈಡೇರುವುದಿಲ್ಲ. ಇದಕ್ಕೆ ಉದಾಹರಣೆಗೆ ಬೇರೆ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.
ನಮಗೆ ಜನರ ಮೇಲೆ ವಿಶ್ವಾಸವಿದೆ. ಸಂಪೂರ್ಣ ಬಹುಮತ ನೀಡುತ್ತಾರೆ. ಅಲ್ಲದೆ ಬಿ.ಎಸ್.ವೈ ಅವರು ಜನರ ನಾಡಿಮಿಡಿತ ಅರಿತಿದ್ದು, ಅವರ ಅನುಭವದ ಪ್ರಕಾರ ಬಿಜೆಪಿ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆರಲಿದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಜನರಿಗೆ ಮೋಸ ಮಾಡಲೆಂದೆ ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡುತ್ತಿದೆ. ಕಾಂಗ್ರೆಸ್ ನಾಯಕರ ಮೇಲೆ ಜನರ ವಿಶ್ವಾಸವಿಲ್ಲ. ಅದಕ್ಕೆ ಕಾರ್ಡ್ ಕೊಡುತ್ತಿದ್ದಾರೆ. ಜನರಿಗೆ ದಾರಿತಪ್ಪಿಸುವ ಹೊಸ ತಂತ್ರವಷ್ಟೆ ಎಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದರು.
ಪ್ರಧಾನಿ ಮೋದಿಯವರು ಸಂವಾದದಲ್ಲಿ ಬೂತ್ ಗೆಲ್ಲುವ ಮೂಲಕ ಕ್ಷೇತ್ರ ಗೆಲ್ಲುವ ಅಂಶವನ್ನು ಒತ್ತಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಸಂಘಟನೆ ಮತ್ತು ಚುನಾವಣೆ ತಂತ್ರ ಮಾಡಲಾಗಿದೆ. ಡಬಲ್ ಎಂಜಿನ ಸರ್ಕಾರ ಪೂರಕವಾಗಿದೆ ಎಂದು ಹೇಳಿದ್ದಾರೆ. ಕುರಿತು ಹೇಳಿದ್ದಾರೆ. ಮೂಲಸೌಕರ್ಯ ಸೇರಿದಂತೆ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.