ಹುಬ್ಬಳ್ಳಿ: ಕಾಂಗ್ರೆಸ್’ನವರು ಹತಾಶರಾಗಿದ್ದಾರೆ. ಕಳೆದ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿನ ಆದರ್ಶನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಜನರನ್ನು ಗುಲಾಮರಂತೆ ತಿಳಿದುಕೊಂಡಿದ್ದಾರೆ. ಮತದಾರರನ್ನು ಮತಬ್ಯಾಂಕ್ ಅಂತಾ ತಿಳಿದುಕೊಂಡು ಏನು ಬೇಕಾದರೂ ಮಾತಾನಾಡಿದರೆ ನಡೆಯುತ್ತದೆ ಅನ್ನೋ ಅಮಲಿನಲ್ಲಿ ಕಾಂಗ್ರೆಸ್ನವರು ಇದ್ದಾರೆ. ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹರಿಹಾಯ್ದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದು ನೋವಾಗಿದೆ. ಅವರು ಕಳೆದ ಐವತ್ತು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದಾರೆ. ಹೀಗಾಗಿ ಕೊನೆಯ ಹಂತದಲ್ಲಿ ಗೌರವಯುತವಾಗಿ ನಡೆದುಕೊಂಡರೆ ಅವರಿಗೆ ಶೋಭೆ ತರುತ್ತದೆ. ಇಲ್ಲದಿದ್ದರೇ ಜನ ಇಷ್ಟು ವರ್ಷ ಏನ್ ಮಾಡಿದ್ದಾರೆ ಎಂದು ಕೇಳುತ್ತಾರೆ ಎಂದರು.
ನರೇಂದ್ರ ಮೋದಿ ಅವರಿಗೆ ಯಾವಾಗ ಯಾವಾಗ ಬೈದಿದ್ದಾರೋ ಆಗೆಲ್ಲ ಮೋದಿ ಅವರ ಮತ ಜಾಸ್ತಿಯಾಗಿದೆ. ಈ ಹಿಂದೆ ಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಹೆಚ್ಚು ನಿಂದಿಸಿದ್ದರು. ಆದರೆ ಅವರು ಮೂರು ಬಾರಿ ಗೆದ್ದು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಇದೀಗ ಖರ್ಗೆ ಅವರ ವಿಷ ಸರ್ಪ ಎಂಬ ಹೇಳಿಕೆ ಜನರ ಭಾವನೆಯನ್ನು ಕೆರಳುಸುತ್ತಿದೆ ಎಂದು ಹರಿಹಾಯ್ದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನನ್ನ ಟಾರ್ಗೆಟ್ ಮಾಡೋದು ಸಹಜ. ಏಕೆಂದರೆ ಅವರ ಮತಬ್ಯಾಂಕ್ ಛಿದ್ರವಾಗಿದೆ. ಅವರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತಬ್ಯಾಂಕ್ ಸರಿದು ಹೋಗಿದೆ. ಹಾಗಾಗಿ ಈಗ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.