ನಟಿ ಜಿಯಾ ಖಾನ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದ ಸೂರಜ್ ಪಾಂಚೋಲಿ ಅವರು ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ಸಾವಿನ ಕೇಸ್’ನಲ್ಲಿ ಬರೋಬ್ಬರಿ 10 ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.
ಜಿಯಾ ಖಾನ್ ಮತ್ತು ಸೂರಜ್ ಪಾಂಚೋಲಿ ಅವರು ರಿಲೇಶನ್’ಶಿಪ್’ನಲ್ಲಿ ಇದ್ದರು. 2013ರ ಜೂನ್ 3ರಂದು ಜಿಯಾ ಖಾನ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸೂರಜ್ ಪಾಂಚೋಲಿ ವಿರುದ್ಧ ಕೇಸ್ ದಾಖಲಾಗಿತ್ತು. ಪೊಲೀಸರಿಗೆ ಜಿಯಾ ಖಾನ್ ಮನೆಯಲ್ಲಿ ಡೆತ್ ನೋಟ್ ಕೂಡ ಪತ್ತೆ ಆಗಿತ್ತು. ಸೂರಜ್ ಪಾಂಚೋಲಿ ಜೊತೆಗಿನ ಸಂಬಂಧದಿಂದ ತಾವು ಅನುಭವಿಸಿದ ಕಷ್ಟಗಳನ್ನು ಅವರು ಡೆತ್ ನೋಟ್’ನಲ್ಲಿ ಎಳೆಎಳೆಯಾಗಿ ವಿವರಿಸಿದ್ದರು. ಆದರೆ ಅಂತಿಮ ವಿಚಾರಣೆಯಲ್ಲಿ ಸೂರಜ್ ಪಾಂಚೋಲಿ ನಿರಪರಾಧಿ ಎಂದು ತೀರ್ಪು ಬಂದಿದೆ.
ಜಿಯಾ ಖಾನ್ ಕೇಸ್ ಹಿನ್ನಲೆ:
ಅದು 2013ರ ಸಮಯ. ಜಿಯಾ ಖಾನ್ ಅವರು ಆಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಲು ಆರಂಭಿಸಿದ್ದರು. ‘ನಿಶಬ್ದ್’ ಚಿತ್ರದಲ್ಲಿನ ನಟನೆಗೆ ಅವರಿಗೆ ಫಿಲ್ಮ್ಫೇರ್ ಪ್ರಶಸ್ತಿ ಸಿಕ್ಕಿತ್ತು. ‘ಘಜಿನಿ’, ‘ಹೌಸ್ಫುಲ್’ ಸಿನಿಮಾಗಳಲ್ಲೂ ನಟಿಸಿ ಅವರು ಗಮನ ಸೆಳೆದಿದ್ದರು. ಚಿತ್ರರಂಗದಲ್ಲಿ ಬಾಳಿ ಬದುಕಬೇಕಾಗಿದ್ದ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ ಆಗಿದ್ದು ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ತೀವ್ರ ಆಘಾತ ಉಂಟು ಮಾಡಿತ್ತು.
ಜಿಯಾ ಖಾನ್ ಅವರದ್ದು ಆತ್ಮಹತ್ಯೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂತು. ಆದರೆ ಅವರ ಕುಟುಂಬದವರು ಈ ವಾದವನ್ನು ಒಪ್ಪಲಿಲ್ಲ. ನಟ ಸೂರಜ್ ಪಾಂಚೋಲಿ ಜೊತೆಗೆ ಜಿಯಾ ಖಾನ್ ಅವರಿಗೆ ಪ್ರೀತಿ ಚಿಗುರಿತ್ತು. ಆದರೆ ಈ ರಿಲೇಶನ್ಶಿಪ್ನಲ್ಲಿ ಜಿಯಾ ಖಾನ್ ತೀವ್ರ ನೋವು ಅನುಭವಿಸಿದ್ದರು ಹಾಗೂ ಅವರ ಸಾವಿಗೆ ಸೂರಜ್ ಪಾಂಚೋಲಿ ಕಾರಣ ಎಂಬುದು ಜಿಯಾ ಖಾನ್ ತಾಯಿ ಆರೋಪ ಮಾಡಿದ್ದರು.
2015ರ ಜೂನ್ ತಿಂಗಳಲ್ಲಿ ಸೂರಜ್ ಪಾಂಚೋಲಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಅವರ ವಿರುದ್ಧ ಸಪ್ಲಿಮೆಂಟರಿ ಚಾರ್ಜ್ಶೀಟ್ ದಾಖಲಿಸಲಾಯಿತು. ಆದರೆ ತನಿಖೆ ಬಳಿಕ ಜಿಯಾ ಖಾನ್ ಅವರ ಕೊಲೆ ನಡೆದಿರುವ ಸಾಧ್ಯತೆ ಕಡಿಮೆ ಇದೆ ಹಾಗೂ ಇದು ಆತ್ಮಹತ್ಯೆ ಎಂದು 2016ರಲ್ಲಿ ಸಿಬಿಐ ಹೇಳಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.