ಮನೆ ಕ್ರೀಡೆ ರವೀಂದ್ರ ಜಡೇಜಾ ಸಿಎಸ್ ಕೆ ನೂತನ ಕ್ಯಾಪ್ಟನ್

ರವೀಂದ್ರ ಜಡೇಜಾ ಸಿಎಸ್ ಕೆ ನೂತನ ಕ್ಯಾಪ್ಟನ್

0

ಹೈದರಾಬಾದ್​: ಇಂಡಿಯನ್​ ಪ್ರೀಮಿಯರ್ ಲೀಗ್​ ಆರಂಭಗೊಳ್ಳಲು ಕೇವಲ ಎರಡು ದಿನ ಬಾಕಿ ಇರುವ  ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಮಹೇಂದ್ರ ಸಿಂಗ್ ಧೋನಿ ಕೆಳಗಿಳಿದಿದ್ದು, ಈ ಸ್ಥಾನಕ್ಕೆ ಆಲ್​ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.

ಈ ಮಾಹಿತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮೂಲಕ ಬಹಿರಂಗಪಡಿಸಿದೆ.

2022ಕ್ಕೂ ಮುನ್ನ ಚೆನ್ನೈ ಸೂಪರ್​ ಕಿಂಗ್ಸ್​ ಮೊದಲ ರಿಟೈನ್ ಆಟಗಾರನಾಗಿ ಜಡೇಜಾರನ್ನು ಆಯ್ಕೆ ಮಾಡಿತ್ತು. ಅವರಿಗೆ 16 ಕೋಟಿ ರೂ. ನೀಡಲಾಗಿತ್ತು. ನಂತರದ ಸ್ಥಾನದಲ್ಲಿ ಧೋನಿಗೆ 12 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿತ್ತು. ಈ ಮೂಲಕ ಜಡೇಜಾ ಚೆನ್ನೈ ತಂಡದ ಭವಿಷ್ಯದ ನಾಯಕ ಎಂಬ ಸೂಚನೆ ಕೊಟ್ಟಿತ್ತು.

ಮಾರ್ಚ್​ 26ರಿಂದ ಇಂಡಿಯನ್​ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳಲಿದ್ದು, ಮೊದಲ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಬಾರಿಯ ರನ್ನರ್​ ಅಪ್​ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಇದಕ್ಕೂ ಮುನ್ನು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದು, ಆ ಜವಾಬ್ದಾರಿ ಆಲ್​ರೌಂಡರ್ ರವೀಂದ್ರ ಜಡೇಜಾಗೆ ವಹಿಸಲಾಗಿದೆ.

ಇನ್ನು ಮುಂದೆ, ಧೋನಿ ತಂಡದಲ್ಲಿ ಆಟಗಾರನಾಗಿ ಮುಂದುವರೆಯಲಿದ್ದಾರೆ. ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಗೂ ಮುಂಚಿತವಾಗಿ ಸಿಎಸ್​ಕೆ, ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ ಹಾಗೂ ಋತುರಾಜ್ ಗಾಯಕ್ವಾಡ್​ ಅವರನ್ನು ರಿಟೈನ್ ಮಾಡಿಕೊಂಡಿತ್ತು.