ಗ್ರಾಹಕರೊಬ್ಬರಿಂದ ಹೆಚ್ಚುವರಿಯಾಗಿ ಸಂಗ್ರಹಿಸಿರುವ ₹10 ಟೋಲ್ ಜೊತೆಗೆ ಪರಿಹಾರ ಮತ್ತು ದಾವೆ ವೆಚ್ಚ ಸೇರಿಸಿ ಒಟ್ಟು ₹8,000 ಪಾವತಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜೆಎಎಸ್ ಟೋಲ್ ರೋಡ್ ಕಂಪೆನಿ ಲಿಮಿಟೆಡ್ಗೆ ಬೆಂಗಳೂರಿನ ವಾಜ್ಯ ಪರಿಹಾರ ಆಯೋಗ ಈಚೆಗೆ ನಿರ್ದೇಶಿಸಿದೆ.
ತನ್ನಿಂದ ಹೆಚ್ಚುವರಿಯಾಗಿ ₹10 ಟೋಲ್ ಹಣ ಸಂಗ್ರಹಿಸಲಾಗಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ಎಂ ಬಿ ಸಂತೋಷ್ ಕುಮಾರ್ ಅವರು ಗ್ರಾಹಕ ರಕ್ಷಣಾ ಕಾಯಿದೆ ಸೆಕ್ಷನ್ 35ರ ಅಡಿ ಹೂಡಿದ್ದ ದಾವೆಯನ್ನು ಬೆಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಬಿ ನಾರಾಯಣಪ್ಪ, ಸದಸ್ಯರಾದ ಜ್ಯೋತಿ ಹಾಗೂ ಎಸ್ ಎಂ ಶರಾವತಿ ಅವರು ಭಾಗಶಃ ಮಾನ್ಯ ಮಾಡಿದ್ದಾರೆ.
“ಹೆಚ್ಚುವರಿಯಾಗಿ ಟೋಲ್ ಪಡೆದಿರುವುದನ್ನು ಸರಿಪಡಿಸಲು ದೂರುದಾರರು ಅಲ್ಲಿಂದ ಇಲ್ಲಿಗೆ ಎಡತಾಕುವಂತಾಗಿದೆ. ದೂರನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿವಾದಿಗಳು ಯಾವುದೇ ಕ್ರಮಕೈಗೊಂಡಿಲ್ಲ. ವಾಹನ ಸವಾರರು ಆಘಾತಕಾರಿ ಅನುಭವಗಳನ್ನು ಹಂಚಿಕೊಂಡಿದ್ದು, ದೂರುದಾರರು ಅಸಮರ್ಪಕ ಶುಲ್ಕ ಕಡಿತದ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಪ್ರತಿವಾದಿಗಳು ಪರಿಹಾರ ಕ್ರಮದ ಬಗ್ಗೆ ಯಾವುದೇ ಜಾಗೃತಿ ವಹಿಸಿಲ್ಲ. ಅಲ್ಲದೇ, ದೂರು ಪರಿಹರಿಸಲು ಯಾವುದೇ ಜವಾಬ್ದಾರಿ ತೆಗೆದುಕೊಂಡಿಲ್ಲ” ಎಂದು ಗ್ರಾಹಕರ ಆಯೋಗ ಆದೇಶದಲ್ಲಿ ಹೇಳಿದೆ.
“ದೂರುದಾರರ ಖಾತೆಗೆ ಕಡಿತ ಮಾಡಲಾದ ₹10 ವಾಪಸ್ ಮಾಡಬೇಕು. ಸೇವಾ ನ್ಯೂನತೆ ಮತ್ತು ಮಾನಸಿಕ ವೇದನೆ ಸೃಷ್ಟಿಸಿದ್ದಕ್ಕಾಗಿ ಪ್ರತಿವಾದಿಗಳಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅದರ ಯೋಜನಾ ನಿರ್ದೇಶಕ ಹಾಗೂ ಜೆಎಎಸ್ ಟೋಲ್ ರೋಡ್ ಕಂಪೆನಿ ಲಿಮಿಟೆಡ್ ₹5,000 ಪರಿಹಾರ ಪಾವತಿಸಬೇಕು. ದಾವೆಯ ವೆಚ್ಚಕ್ಕಾಗಿ ₹3,000 ಪ್ರತ್ಯೇಕವಾಗಿ ಪಾವತಿಸಬೇಕು. ಇದೆಲ್ಲವೂ ಈ ಆದೇಶವಾದ ಎರಡು ತಿಂಗಳ ಒಳಗೆ ಪಾವತಿಯಾಗಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.
“ಸ್ವಯಂಚಾಲಿತವಾಗಿ ಟೋಲ್ ಕಡಿತ ಮಾಡುವುದನ್ನು ಫಾಸ್ಟ್ಟ್ಯಾಗ್ ಖಾತರಿಪಡಿಸಿದರೂ ಕೆಲವೊಮ್ಮೆ ಸಿಸ್ಟಂನಲ್ಲಿನ ಸಮಸ್ಯೆ ಮತ್ತು ಪ್ರಕ್ರಿಯೆಯಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಟೋಲ್ ಹಣ ಕಡಿತವಾಗುತ್ತದೆ. ತಪ್ಪಾಗಿ ಹಣ ಕಡಿತವಾಗಿರುವುದರ ಮಾಹಿತಿ ಸ್ವೀಕರಿಸುವುದು ತಡವಾಗಿರುವುದರಿಂದ ವಿವಾದ ಆರಂಭವಾಗಿದೆ. ಹೊಸ ತಂತ್ರಜ್ಞಾನ ಅಳವಡಿಸಿಕೊಂಡಾಗ ಆರಂಭದಲ್ಲಿ ಸಮಸ್ಯೆ ಎದುರಾಗುತ್ತದೆ. ಜವಾಬ್ದಾರಿಯುತ ಪ್ರಾಧಿಕಾರವು ಅಹವಾಲು ಆಲಿಸಿ, ಆ ದೋಷವನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಸರಿಪಡಿಸಬೇಕು. ಜವಾಬ್ದಾರಿಯುತ ಸಚಿವಾಲಯವು ತನ್ನ ವೆಬ್ಸೈಟ್ನಲ್ಲಿ ಯಾವ ರೀತಿಯಲ್ಲಿ ಮತ್ತು ಹೇಗೆ ದೋಷ ಸರಿಪಡಿಸಲಾಗುತ್ತದೆ ಎಂಬುದನ್ನು ತಿಳಿಸಬೇಕು” ಎಂದು ಹೇಳಿದೆ.
ಪ್ರಕರಣದ ಹಿನ್ನೆಲೆ: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿರುವ ಜೆಎಎಸ್ 2020ರ ಫೆಬ್ರವರಿ 20ರಿಂದ ಮೇ 16ರವರೆಗೆ ಟೋಲ್ ಪ್ಲಾಜಾದಲ್ಲಿ ಬೆಂಗಳೂರಿನ ಸಂತೋಷ್ ಕುಮಾರ್ ಅವರು ಎರಡು ಬಾರಿ ಅಡ್ಡಾಡಿದ್ದು, ₹35 ಅನ್ನು ತಮ್ಮ ಖಾತೆಯಿಂದ ಕಡಿತ ಮಾಡಬೇಕಿತ್ತು. ಆದರೆ, ಎರಡೂ ಸಂದರ್ಭದಲ್ಲೂ ಅವರಿಂದ ₹40 ಕಡಿತ ಮಾಡಲಾಗಿದೆ. ಈ ಸಂಬಂಧ ಪ್ರತಿವಾದಿಗಳಿಗೆ 2020ರ ಮಾರ್ಚ್ 10ರಂದು ಹೆಚ್ಚುವರಿ ಟೋಲ್ ಕಡಿತ ಮಾಡಿರುವುದನ್ನು ಸರಿಪಡಿಸುವಂತೆ ಅವರು ಕೋರಿದ್ದರು. ನೋಟಿಸ್ ನೀಡಿದ ಬಳಿಕವೂ ಪ್ರತಿವಾದಿಗಳು ತಪ್ಪು ಸರಿಪಡಿಸಿರಲಿಲ್ಲ. ಅಲ್ಲದೇ, ಹೆಚ್ಚುವರಿಯಾಗಿ ಪಡೆದಿರುವ ಟೋಲ್ ಹಣವನ್ನು ಮರಳಿಸಿರಲಿಲ್ಲ. ಆದರೆ, ಹೆಚ್ಚುವರಿಯಾಗಿ ಹಣ ಸ್ವೀಕರಿಸುವುದನ್ನು ಮುಂದುವರಿಸಿದ್ದರು.
ಹೆಚ್ಚುವರಿಯಾಗಿ ಟೋಲ್ನಲ್ಲಿ ಹಣ ಸಂಗ್ರಹಿಸುವ ಮೂಲಕ ಸೇವಾ ನ್ಯೂನತೆ ಎಸಗಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರಿಂದ ಸಣ್ಣ ಪ್ರಮಾಣದ ಹಣವೇ ಆದರೂ ಅದು ಒಟ್ಟುಗೂಡಿಸಿದರೆ ಭಾರಿ ಮೊತ್ತವಾಗಲಿದೆ. ಚಿಲ್ಲರೆ ಹಣಕ್ಕೆ ದಾವೆ ಹೂಡಿದರೆ ವೆಚ್ಚ ಹೆಚ್ಚಾಗಲಿದೆ ಎಂದು ಯಾರೂ ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. 2019ರ ಜುಲೈ 1ರಿಂದ 2020ರ ಜೂನ್ 30ರವರೆಗೆ ಒಂದು ಟೋಲ್ ದಾಟಿದರೆ ₹20, ಎರಡೂ ಟೋಲ್ ದಾಟಿದರೆ ₹35 ಸ್ವೀಕರಿಸಿಬೇಕು ಎಂದು ಹೇಳಲಾಗಿದೆ ಎಂದು ದೂರುದಾರರು ಆಕ್ಷೇಪಿಸಿದ್ದರು.
ಸಂತೋಷ್ ಕುಮಾರ್ ಅವರು ತಮ್ಮಿಂದ ಹೆಚ್ಚುವರಿಯಾಗಿ ಪಡೆದಿರುವ ಹತ್ತು ರೂಪಾಯಿ ಮರಳಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸುವಂತೆ ಆದೇಶಿಸಬೇಕು. ಇದರ ಜೊತೆಗೆ ₹25,000 ಪರಿಹಾರ ಮತ್ತು ₹15,000 ದಾವೆ ವೆಚ್ಚ ಪಾವತಿಸಲು ಆದೇಶ ಮಾಡಬೇಕು ಎಂದು ಕೋರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.