ಮನೆ ಉದ್ಯೋಗ ಘಮ ಘಮ ಶುಂಠಿ ನಿಂಬೆ ಹಣ್ಣಿನ ರಸಂ

ಘಮ ಘಮ ಶುಂಠಿ ನಿಂಬೆ ಹಣ್ಣಿನ ರಸಂ

0

ವಾತಾವರಣವು ತಂಪಾಗಿರುವಾಗ ನಾಲಿಗೆ ರುಚಿಕರವಾದ ಹಾಗೂ ಬಿಸಿಬಿಸಿಯಾದ ಖಾದ್ಯವನ್ನು ಸವಿಯಲು ಬಯಸುವುದು. ಅದರಲ್ಲೂ ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟಕ್ಕೆ ರುಚಿಕರವಾದ ಮತ್ತು ಬಿಸಿಯಾದ ಅನ್ನ ರಸಮ್ ವಿಶೇಷ ತೃಪ್ತಿ ಭಾವನೆ ನೀಡುತ್ತವೆ. ಮಳೆಗಾಲದ ಈ ಚಳಿಗೆ ನಿಮ್ಮ ಆರೋಗ್ಯವನ್ನು ಬೆಚ್ಚಗಿಡಲು ನಿಂಬು ಮತ್ತು ಶುಂಠಿ ಮಿಶ್ರಿತ ರಸಮ್ ಸಹಾಯ ಮಾಡುವುದು.ಹುಳಿ, ಸಿಹಿ ಮತ್ತು ಖಾರದ ಮಿಶ್ರಣದಲ್ಲಿ ತಯಾರಿಸಲಾಗುವ ಈ ರಸಮ್ ಅನ್ನು ಅನ್ನದ ಜೊತೆ ಸವಿಯಬಹುದು. ಇಲ್ಲವೇ ನೀವು ಬಯಸುವುದಾದರೆ ಬಿಸಿಬಿಸಿ ಇರುವಾಗ ಕಷಯಾಯದ ರೂಪದಲ್ಲಿಯೂ ಕುಡಿಯಬಹುದು. ಗಂಟಲ ಕೆರತ ಅಥವಾ ಶೀತದ ಸಮಸ್ಯೆ ಇದ್ದರೆ ಒಳ್ಳೆಯ ಉಪಶಮನ ದೊರೆಯುವುದು. ಸುಲಭ ಹಾಗೂ ಸರಳ ವಿಧಾನದಲ್ಲಿ ಹೇಗೆ ತಯಾರಿಸುವುದು ಎನ್ನುವುದನ್ನು ಇಲ್ಲಿ ತಿಳಿಸಿಕೊಡುತ್ತಿದ್ದೇವೆ.

Join Our Whatsapp Group

 (ಬಡಿಸುವ ಪ್ರಮಾಣ: 2)

ಪ್ರಮುಖ ಸಾಮಗ್ರಿ

•       2 ಕಪ್ ಮಸೂರ್ ದಾಲ್

ಒಗ್ಗರಣೆ

•       2 ಚಮಚ ತುಪ್ಪ

ಮುಖ್ಯ ಅಡುಗೆಗೆ

•       ಅಗತ್ಯ ತಕ್ಕಷ್ಟು ಸಾಸಿವೆ

•       1 ಚಮಚ ಜೀರಿಗೆೆ

•       1 ಚಮಚ ಕರಿಮೆಣಸು

•       1 – ನಿಂಬೆಹಣ್ಣು

•       1 – ಟೊಮೆಟೋ

•       3 ಇಂಚುಗಳು ಶುಂಠಿ

•       6 – ಹಸಿಮೆಣಸಿನಕಾಯಿ

•       ಅಗತ್ಯ ತಕ್ಕಷ್ಟು ಕರಿಬೇವು

•       ಅಗತ್ಯ ತಕ್ಕಷ್ಟು ಅರಿಶಿಣ

•       1/2 ಚಮಚ ಉಪ್ಪು

ಹೇಗೆ ಮಾಡುವುದು

Step 1:

– ಮೊದಲಿಗೆ ತೊಗರಿ ಬೇಳೆಯನ್ನು ಚೆನ್ನಾಗಿ ತೊಳೆದುಕೊಂಡು ಕುಕ್ಕರ್ ಪಾತ್ರೆಗೆ ಸೇರಿಸಿ.- ನಂತರ ಸ್ವಲ್ಪ ನೀರು ಮತ್ತು ಅರಿಶಿನ ಸೇರಿಸಿ ಮುಚ್ಚಳವನ್ನು ಮುಚ್ಚಿ.- 5-6 ಸೀಟಿ ಕೂಗಿಸಿಕೊಂಡು ಮೃದುವಾಗಿ ಬೇಯಿಸಿಕೊಳ್ಳಬೇಕು.

Step 2:

– ಪ್ರತ್ಯೇಕ ಬಾಣಲೆಯಲ್ಲಿ ಕಾಳು ಮೆಣಸು ಮತ್ತು ಜೀರಿಗೆ ಸೇರಿಸಿ ಒಣ ರೂಪದಲ್ಲಿಯೇ ಹುರಿಯಬೇಕು.- ನಂತರ ಒರಟಾಗಿ ರುಬ್ಬಿಕೊಳ್ಳಿ.

Step 3:

– ಒಂದು ಬಾಣಲೆಯಲ್ಲಿ ತುಪ್ಪ ಸೇರಿಸಿ, ಬಿಸಿ ಮಾಡಿ.- ಬಿಸಿಯಾದ ತುಪ್ಪಕ್ಕೆ ಸಾಸಿವೆ ಮತ್ತು ಜೀರಿಗೆ ಸೇರಿಸಿ ಹುರಿಯಿರಿ.- ನಂತರ ಹೆಚ್ಚಿಕೊಂಡ ಶುಂಠಿ ಚೂರು, ಹಸಿಮೆಣಸಿನ ಕಾಯಿ, ಕರಿಬೇವಿನ ಎಲೆ ಸೇರಿಸಿ ಹುರಿಯಿರಿ.

Step 4:

– ಹೆಚ್ಚಿಕೊಂಡ ಟೊಮ್ಯಾಟೋ ಸೇರಿಸಿ, 2-3 ನಿಮಿಷಗಳ ಕಾಲ ಬೇಯಿಸಿ.- ಟೊಮ್ಯಾಟೋ ಚೆನ್ನಾಗಿ ಬೆಂದ ನಂತರ ಬೇಯಿಸಿಕೊಂಡ ತೊಗರಿ ಬೇಳೆಯನ್ನು ಸೇರಿಸಿ, ಚೆನ್ನಾಗಿ ಮಿಶ್ರಗೊಳಿಸಿ.

Step 5:

– ಒರಟಾಗಿ ರುಬ್ಬಿಕೊಂಡ ಕಾಳು ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ 4-5 ನಿಮಿಷಗಳ ಕಾಲ ಕುದಿಸಿ.- ಕುದಿ ಬಂದ ಬಳಿಕ ಉರಿಯನ್ನು ಆರಿಸಿ, ನಿಂಬೆ ರಸವನ್ನು ಸೇರಿಸಿ.

Step 6:

– ಸಿದ್ಧವಾದ ನಿಂಬು ಮತ್ತು ಶುಂಠಿ ರಸದ ರಸಮ್ಅನ್ನು ರಾಗಿ ಮುದ್ದೆ, ಅನ್ನ ಅಥವಾ ರೊಟ್ಟಿಯೊಂದಿಗೆ ಸವಿಯಬಹುದು.