ಬೆಂಗಳೂರಿನಲ್ಲಿರುವ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್’ಟಿಐ) ಕಾಯಿದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿಹಿಡಿದಿದೆ.
ಆಯೋಗದ ಆದೇಶ ಪ್ರಶ್ನಿಸಿ ಕೆಜಿಎ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್ ಎಸ್ ಸಂಜಯ ಗೌಡ ಅವರ ನೇತೃತ್ವದ ಏಸಕದಸ್ಯ ಪೀಠವು ವಜಾಗೊಳಿಸಿದೆ.
ಬೆಂಗಳೂರು ಟರ್ಫ್ ಕ್ಲಬ್, ಮೈಸೂರು ಟರ್ಫ್ ಕ್ಲಬ್, ಇನ್ಸ್’ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಮತ್ತು ಲೇಡಿಸ್ ಕ್ಲಬ್’ಗಳು ಸಹ ಸರ್ಕಾರಿ ಭೂಮಿಯನ್ನು ರಿಯಾಯಿತಿ ದರದಲ್ಲಿ ಗುತ್ತಿಗೆ ಪಡೆದಿವೆ. ಇದರಿಂದ ಈ ನಾಲ್ಕು ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರಗಳಾಗಿದ್ದು, ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಗೆ ಒಳಪಡಲಿದೆ ಎಂದು 2021ರ ಜನವರಿ 13ರಂದು ಆದೇಶಿಸಿದೆ. ಈ ಪ್ರಕರಣದಲ್ಲಿರುವ ಅರ್ಜಿದಾರ ಸಂಘ ಸಹ, ತನ್ನನ್ನು ಆರ್’ಟಿಐ ಕಾಯಿದೆ ವ್ಯಾಪ್ತಿಗೆ ಸೇರಿಸಿ ಮಾಹಿತಿ ಆಯೋಗವು 2014ರ ಅಕ್ಟೋಬರ್ 14ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿದೆ ಎಂದು ಆದೇಶದಲ್ಲಿ ಪೀಠ ಹೇಳಿದೆ.
ಅಲ್ಲದೆ, ಮೈಸೂರು ಟಫ್ ಕ್ಲಬ್ ಹಾಗೂ ಇತರೆ ಕ್ಲಬ್’ಗಳ ಪ್ರಕರಣದಲ್ಲಿ ಹೇಳಿರುವಂತೆ ಕೆಜಿಎ ಸಹ 124 ಎಕರೆ ಸರ್ಕಾರಿ ಜಮೀನನ್ನು 2010ರಿಂದ 30 ವರ್ಷ ಕಾಲ ಗುತ್ತಿಗೆ ಪಡೆದಿದೆ. ಹಾಗೆಯೇ, ತನ್ನ ವಾರ್ಷಿಕ ನಿವ್ವಳ ಆದಾಯದಲ್ಲಿ ಅತ್ಯಂತ ಕಡಿಮೆ ಪ್ರಮಾಣ ಅಂದರೆ ಕೇವಲ ಶೇ 2 ಪ್ರಮಾಣವನ್ನು (ಸಬ್ಸಿಡಿ ದರ) ಬಾಡಿಗೆ ಪಾವತಿಸುತ್ತಿದೆ. ಸರ್ಕಾರಿ ಜಮೀನು ಗುತ್ತಿಗೆ ಪಡೆದ ಮತ್ತು ಸಬ್ಸಿಡಿ ದರದಲ್ಲಿ ಬಾಡಿಗೆ ಪಾವತಿ ಮಾಡುತ್ತಿರುವ ಕಾರಣ ಕೆಜಿಎ ಸಾರ್ವಜನಿಕ ಪ್ರಾಧಿಕಾರವಾಗಲಿದೆ. ಆದ್ದರಿಂದ, ಕೆಜಿಎ ಸಹ ಆರ್ಟಿಐ ಕಾಯಿದೆ ವ್ಯಾಪ್ತಿಗೆ ಬರಲಿದ್ದು, ಈ ಕುರಿತು ಕರ್ನಾಟಕ ಮಾಹಿತಿ ಆಯೋಗದ ಆದೇಶ ಸೂಕ್ತವಾಗಿದೆ ಎಂದು ಆದೇಶದಲ್ಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ.
ವಕೀಲ ಎಸ್ ಉಮಾಪತಿ ಅವರು ಮಾಹಿತಿ ಹಕ್ಕು ಕಾಯಿದೆ ಅಡಿ ಕೆಲವೊಂದು ಮಾಹಿತಿ ಕೋರಿ ಕೆಜಿಎಗೆ 2012ರ ಆಗಸ್ಟ್ 30ರಂದು ಅರ್ಜಿ ಸಲ್ಲಿಸಿದ್ದರು. ಆದರೆ, ತಾನು ಮಾಹಿತಿ ಹಕ್ಕು ಕಾಯಿದೆಗೆ ಒಳಪಡುವುದಿಲ್ಲ ಎಂದಿದ್ದ ಕೆಜಿಎ, ಮಾಹಿತಿ ನೀಡಲು ನಿರಾಕರಿಸಿತ್ತು. ಇದರಿಂದ ಉಮಾಪತಿ ಅವರು ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಆಯೋಗ, ಕೆಜಿಎ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ 2014ರ ಅಕ್ಟೋಬರ್ 14ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಕೆಜಿಎ, ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.