ಮನೆ ರಾಜಕೀಯ ಬಿಜೆಪಿ ಅಭ್ಯರ್ಥಿ ಸಿ.ಎಸ್ ನಿರಂಜನಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ

ಬಿಜೆಪಿ ಅಭ್ಯರ್ಥಿ ಸಿ.ಎಸ್ ನಿರಂಜನಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ

0

ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್ ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.

Join Our Whatsapp Group

ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.

ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.