ಮನೆ ಅಪರಾಧ ವಿಜಯಪುರ: ಕಾರ್ಪೊರೇಟರ್ ಪತಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ವಿಜಯಪುರ: ಕಾರ್ಪೊರೇಟರ್ ಪತಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

0

ವಿಜಯಪುರ: ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ.

Join Our Whatsapp Group

ವಾರ್ಡ್ ನಂ.19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್’ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಎದೆ ಹಾಗೂ ಹಣೆಗೆ ಗುಂಡುಗಳು ತಗುಲಿದ್ದು, ಆರು ಗುಂಡುಗಳು ದೇಹ ಹೊಕ್ಕಿವೆ. ಗುಂಡಿನ ದಾಳಿ ನಡೆಸಿದ ದಾಳಿಕೋರರು ಪರಾರಿಯಾಗಿದ್ದಾರೆ.

ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.