ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹತಾಶೆ ಅಪಾಯದ ಹಂತ ತಲುಪಿದ್ದು, ರಾಜ್ಯದ ದಲಿತ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಹತ್ಯೆಗೈಯ್ಯಲು ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ರಾಜಸ್ತಾನದ ಶಾಸಕ ಮದನ್ ದಿಲಾವರ್, ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿದ್ದರು. ಈಗ ಅದೇ ಬಿಜೆಪಿಯ ಚಿತ್ತಾಪುರ ಅಭ್ಯರ್ಥಿ ಮಣಿಕಂಠ ರಾಠೋಡ್, ಖರ್ಗೆ ಮತ್ತು ಅವರ ಇಡೀ ಕುಟುಂಬ ಹತ್ಯೆಗೆ ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ ಎಂದು ಆರೋಪಿಸಿದರು.
ಇದು ಕೇವಲ ಖರ್ಗೆ ಅವರ ಮೇಲೆ ನಡೆಸುವ ಹಲ್ಲೆ ಅಲ್ಲ; ಇಡೀ ಕನ್ನಡಿಗರ ಸ್ವಾಭಿಮಾನ ಮತ್ತು ಅಸ್ಮಿತೆಯ ಕೊಲೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಮತ್ತು ಅವರ ಕುಟುಂಬ ಹತ್ಯೆ ಮಾಡಿರುವುದಾಗಿ ಹೇಳಿದ 50 ಸೆಕೆಂಡ್ ಗಳ ಆಡಿಯೋವನ್ನು ಇದೇ ವೇಳೆ ಅವರು ಬಹಿರಂಗಗೊಳಿಸಿದರು. ಅದರಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರೊಂದಿಗೆ ನಡೆಸಿದ ಸಂಭಾಷಣೆ ಎಂದು ಸುರ್ಜೇವಾಲ ಹೇಳಿದರು.
ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗುವುದು ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.