ಮನೆ ರಾಜಕೀಯ ಖರ್ಗೆ ಕುಟುಂಬಸ್ಥರ ಹತ್ಯೆ ಕುರಿತಾದ ಆಡಿಯೋ: ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆಂದ ಸಿಎಂ ಬೊಮ್ಮಾಯಿ

ಖರ್ಗೆ ಕುಟುಂಬಸ್ಥರ ಹತ್ಯೆ ಕುರಿತಾದ ಆಡಿಯೋ: ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆಂದ ಸಿಎಂ ಬೊಮ್ಮಾಯಿ

0

ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಕುರಿತಾದ ಆಡಿಯೋವನ್ನು ತಿರುಚಲಾಗಿದೆಯೋ ಏನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Join Our Whatsapp Group

ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಸಿಎಂ, ಆಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ. ಬಿ.ಎಲ್ ಸಂತೋಷ್​ ಅವರು ಬಿಜೆಪಿಗೆ ಲಿಂಗಾಯತ ಮತಗಳು ಬೇಡ ಎಂದಿರುವ ಸುದ್ದಿಯೂ ಕೂಡ ಫೇಕ್. ಈಗಾಗಲೇ ಈ ಬಗ್ಗೆ ದೂರು ದಾಖಲು ಮಾಡಲಾಗಿದೆ ಎಂದರು.

ನಟ ಶಿವರಾಜ್​ಕುಮಾರ್ ಮೇಲೆ ಬಿಜೆಪಿ ಟ್ರೋಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ನಟರೂ ಕೂಡ ಯಾವ ಪಕ್ಷದ ಪರವಾಗಿ ಬೇಕಾದರೂ ಪ್ರಚಾರ ಮಾಡಬಹುದು. ಸಂಸದ ಪ್ರತಾಪ್ ಸಿಂಹ ಮತ್ತು ಶಿವರಾಜ್ ​ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಶಿವರಾಜ್​ಕುಮಾರ್ ಪ್ರಚಾರದ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಪ್ರಚಾರಕ್ಕೆ ಬರುತ್ತಿದ್ದಾರೆ. ಅದು ಅವರ ಪಕ್ಷದ ಪ್ರಚಾರ ಎಂದು ಹೇಳಿದರು.

 ಇಂದು ಮೋದಿ ಕೂಡ ಹುಬ್ಬಳ್ಳಿಗೆ ಬರುತ್ತಿದ್ದಾರೆ. ಮೊದಲಿಗಿಂತಲೂ ಈಗ ಮೋದಿ ಅಲೆ ಜಾಸ್ತಿಯಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.