ಬೆಂಗಳೂರು: ಬೆಂಗಳೂರಿನ ಸಾಫ್ಟ್’ವೇರ್ ಇಂಜಿನಿಯರ್ ಮ್ಯಾಟ್ರಿಮೋನಿಯಲ್ ಸೈಟ್’ನಲ್ಲಿ ಪರಿಚಯವಾಗಿದ್ದ ಮಹಿಳೆಯನ್ನು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಹಣ ಕಳೆದುಕೊಂಡ ಮಾರತ್ತಹಳ್ಳಿಯ 48 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮಾರತ್ತಹಳ್ಳಿ ಸಮೀಪದ ಮುನ್ನೆಕೊಲ್ಲಲ್ ನಿವಾಸಿ ಸಲ್ಮಾನ್ (ಹೆಸರು ಬದಲಿಸಲಾಗಿದೆ) ವೈವಾಹಿಕ ಸೈಟ್’ನಲ್ಲಿ ತನ್ನ ಪ್ರೊಫೈಲ್ ಅಪ್ಲೋಡ್ ಮಾಡಿದ್ದ. ಈ ಸೈಟ್’ನಲ್ಲಿ ಫಾತಿಮಾ ಮುಹಮ್ಮದ್ ಎಂಬ ಖಾತೆಯಿಂದ ಏಪ್ರಿಲ್ ಮೊದಲ ವಾರದಲ್ಲಿ ಸಲ್ಮಾನ್’ನನ್ನು ಸಂಪರ್ಕಿಸಲಾಗಿದೆ. ತಾನು ಲಂಡನ್’ನಲ್ಲಿ ನೆಲೆಸಿದ್ದು, ಶೀಘ್ರದಲ್ಲೇ ಭಾರತಕ್ಕೆ ಮರಳುತ್ತೇನೆ ಎಂದು ಹೇಳಿಕೊಂಡಿದ್ದಳು.
ಹೀಗೆ ಪರಿಚಯ ಮಾಡಿಕೊಂಡ ಫಾತಿಮಾ, ಸಲ್ಮಾನ್ ಮೇಲೆ ಆಸಕ್ತಿಯನ್ನು ತೋರಿದ್ದಾಳೆ. ಹೀಗೆ ಪರಸ್ಪರ ಮಾತುಕತೆ ನಡೆಯುತ್ತಿದ್ದಾಗ ಸಲ್ಮಾನ್’ಗೆ ಏಪ್ರಿಲ್ 11ರಂದು ಮಹಿಳೆಯೊಬ್ಬರು ಕರೆ ಮಾಡಿ ತಾನು ಕಸ್ಟಮ್ಸ್ ಅಧಿಕಾರಿ ಮನಿಷಾ ಶರ್ಮಾ ಎಂದು ಪರಿಚಯಿಸಿಕೊಂಡಿದ್ದರು. ಫಾತಿಮಾ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದು 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿದೇಶಿ ಕರೆನ್ಸಿಯನ್ನು ತಂದಿದ್ದರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಅದನ್ನು ಅವರ ಕೆಲವು ದಾಖಲೆಗಳೊಂದಿಗೆ ವಶಪಡಿಸಿಕೊಂಡಿದ್ದಾರೆ ಎಂದು ಮನಿಷಾ ಸಲ್ಮಾನ್’ಗೆ ತಿಳಿಸಿದ್ದಾರೆ.
ಮನಿಷಾ ತನ್ನ ಹಣ ಮತ್ತು ಕಾಗದಪತ್ರಗಳನ್ನು ಬಿಡುಗಡೆ ಮಾಡಲು ತನ್ನ ಪರವಾಗಿ ಶುಲ್ಕ ಮತ್ತು ತೆರಿಗೆಗಳನ್ನು ಪಾವತಿಸುವಂತೆ ಸಲ್ಮಾನ್’ಗೆ ಸೂಚಿಸಿದ್ದಾಳೆ. ಅದರಂತೆ ಸಲ್ಮಾನ್ ಒಟ್ಟು 34,40,700 ರೂ.ಗಳನ್ನು ಮಹಿಳೆ ನೀಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಆದರೆ ಏಪ್ರಿಲ್ 19ರಿಂದ ಮನಿಷಾ ಆಗಲಿ ಅಥವಾ ಫಾತಿಮಾ ಆಗಲಿ ಸಂಪರ್ಕಕ್ಕೆ ಸಿಕ್ಕಿಲ್ಲ.
ಕೊನೆಗೆ ತಾನು ಸೈಬರ್ ಅಪರಾಧಿಗಳ ಮೋಸದ ಜಾಲಕ್ಕೆ ಬಲಿಯಾಗಿರುವುದು ತಿಳಿದು ಸೈಬರ್ ಠಾಣೆ ಮೆಟ್ಟಿಲೇರಿದ್ದಾರೆ.
ವೈಟ್’ಫೀಲ್ಟ್ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.