ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್’ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಪರ ಈ ಬಾರಿ ಕ್ಯಾಮರೋನ್ ಗ್ರೀನ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು.
ಆದರೆ ಗ್ರೀನ್ 6 ರನ್ಗಳಿಸಿ ತುಷಾರ್ ದೇಶಪಾಂಡೆ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಹಿಟ್ಮ್ಯಾನ್ 3 ಎಸೆತಗಳನ್ನು ಎದುರಿಸಿ ದೀಪಕ್ ಚಹರ್’ಗೆ ವಿಕೆಟ್ ಒಪ್ಪಿಸಿದರು. ಆದರೆ ಇದರ ನಡುವೆ ಯಾವುದೇ ರನ್ಗಳಿಸಿಲ್ಲ ಎಂಬುದು ವಿಶೇಷ.
ಈ ಶೂನ್ಯದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಆಟಗಾರ ಎಂಬ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು.
ದಿನೇಶ್ ಕಾರ್ತಿಕ್ 217 ಇನಿಂಗ್ಸ್ಗಳಲ್ಲಿ ಒಟ್ಟು 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದೀಗ ಈ ದಾಖಲೆಯನ್ನು ಹಿಟ್ಮ್ಯಾನ್ ಮುರಿದಿರುವುದು ವಿಶೇಷ.
ರೋಹಿತ್ ಶರ್ಮಾ 232 ಇನಿಂಗ್ಸ್ಗಳಲ್ಲಿ ಒಟ್ಟು 16 ಬಾರಿ ಯಾವುದೇ ರನ್ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ.
1- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 232 ಇನಿಂಗ್ಸ್ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
2- ದಿನೇಶ್ ಕಾರ್ತಿಕ್: 217 ಐಪಿಎಲ್ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 15 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದರು.2- ದಿನೇಶ್ ಕಾರ್ತಿಕ್: 217 ಐಪಿಎಲ್ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 15 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದರು.
3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 94 ಇನಿಂಗ್ಸ್ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.
5- ಅಂಬಾಟಿ ರಾಯುಡು: ಸಿಎಸ್ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 182 ಇನಿಂಗ್ಸ್ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.