ನಾಳೆ (ಮೇ.10) ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ (Voting) ನಡೆಯುವ ಹಿನ್ನೆಲೆ ಗೋವಾ ಸರ್ಕಾರ (Goa Government) ಕಾರ್ಮಿಕರಿಗೆ ನಾಳೆ ವೇತನ ಸಹಿತ ರಜೆ ಘೋಷಿಸಿದೆ. ಈ ಹಿನ್ನೆಲೆ ಮತದಾನದ ಮಾಡಲು ಸಾವಿರಾರು ಕನ್ನಡಿಗರು (Kannadigas) ಗೋವಾದಿಂದ ಸ್ವಗ್ರಾಮಗಳತ್ತ ಆಗಮಿಸುತ್ತಿದ್ದಾರೆ. ಇದರಿಂದ ಗೋವಾದಿಂದ ರಾಜ್ಯಕ್ಕೆ ಆಗಮಿಸುವ ಬಸ್ಗಳೆಲ್ಲವೂ ಫುಲ್ ರಶ್ ಆಗಿವೆ. ಇನ್ನು ಕೆಲವೊಂದಿಷ್ಟು ರಾಜಕೀಯ ಪಕ್ಷಗಳ ನಾಯಕರು ಈ ಕಾರ್ಮಿಕರಿಗೆ ಬಸ್ಗಳ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆ ಬೆಳಗಾವಿ ತಾಲೂಕಿನ ಪೀರನವಾಡಿ ಚೆಕ್ಪೋಸ್ಟ್ನಲ್ಲಿ ಗೋವಾದಿಂದ ಬರುವ ಎಲ್ಲಾ ವಾಹನಗಳನ್ನು ಪೊಲೀಸ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಮರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿವೆ.
ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು. ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.
ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.