ಹೈದರಾಬಾದ್: ತೆಲಂಗಾಣ ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಮೂಲಕ ಸಾವಿಗೆ ಶರಣಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 12ಕ್ಕೆ ತಲುಪಿದೆ.
ಮಣಿಕೊಂಡ ಕೆಪಿಆರ್ ಕಾಲೋನಿಯ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ಮೂರು ವಿಷಯಗಳಲ್ಲಿ ಅನುತ್ತೀರ್ಣಳಾದ ನಂತರ ಮನನೊಂದ ಆಕೆ, ಕಟ್ಟಡದಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ವಿದ್ಯಾರ್ಥಿನಿಯನ್ನ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿತಾದರೂ ಬುಧವಾರ ಸಾವನ್ನಪ್ಪಿದ್ದಾಳೆ.
ಹಸ್ತಿನಾಪುರದ ಖಾಸಗಿ ಕಾಲೇಜಿನಲ್ಲಿ ಇಂಟರ್ ಮೊದಲ ವರ್ಷದ ವ್ಯಾಸಂಗ ಮಾಡುತ್ತಿದ್ದ ವನಸ್ಥಲಿಪುರಂನಲ್ಲಿ ನೆಲೆಸಿರುವ ವಿದ್ಯಾರ್ಥಿಯೊಬ್ಬ (17) ಪರೀಕ್ಷೆಯಲ್ಲಿ ಅನುತ್ತೀರ್ಣನಾದ ನೋವಿನಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಂಜಗುಟ್ಟ ಪ್ರತಾಪನಗರದ ವಿದ್ಯಾರ್ಥಿಯೊಬ್ಬಳು (16) ಯಳ್ಳಾರೆಡ್ಡಿಗುಡಾದ ಕಾಲೇಜಿನಲ್ಲಿ ಇಂಟರ್ ಸಿಇಸಿ ಓದುತ್ತಿದ್ದಳು. ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆ ಮನನೊಂದು ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಾವಿಗೆ ಶರಣಾಗಿದ್ದಾಳೆ.
ಕರೇಪಲ್ಲಿಯ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಓದುತ್ತಿದ್ದ ಖಮ್ಮಂ ಜಿಲ್ಲೆಯ ಕರೇಪಲ್ಲಿ ಮಂಡಲ ಮೂಲದ ವಿದ್ಯಾರ್ಥಿ (16) ಎಕ್ಸಾಂ ಫೇಲ್ ಆದ ಕಾರಣ ಮನನೊಂದು ಆತ ಟೊಮೆಟೊದಲ್ಲಿ ಇಲಿ ಪಾಷಾಣ ಬೆರೆಸಿ ತಿಂದಿದ್ದಾನೆ. ಬಳಿಕ, ಬಿಪಿ ಮಾತ್ರೆಗಳನ್ನು ಸೇವಿಸಿದ್ದಾನೆ. ಕೂಡಲೇ ಆತನನ್ನು ಖಮ್ಮಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.