ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹೂಟಗಳ್ಳಿ ಸರ್ಕಾರಿ ಪ್ರೌಢ ಶಾಲೆ ಮತಗಟ್ಟೆಗೆ ಮತ ಚಲಾಯಿಸಲು ಬಂದಿದ್ದ ವ್ಯಕ್ತಿ ಇವಿಎಂ– ಕಂಟ್ರೋಲ್ ಯೂನಿಟ್ ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿದೆ.
ಹೂಟಗಳ್ಳಿ ನಿವಾಸಿ ಶಿವಮೂರ್ತಿ ಎಂಬುವರು ಮೇ 10ರ ಬುಧವಾರ ಸಂಜೆ 4.15ರ ಸುಮಾರು ಮತ ಚಲಾಯಿಸಲು ಬಂದಿದ್ದರು. ಗುರುತಿನ ಚೀಟಿ ಸಿಬ್ಬಂದಿಗೆ ನೀಡಿದ ನಂತರ ಏಕಾಏಕಿ ವಿದ್ಯುನ್ಮಾನ ಮತಯಂತ್ರದ ಕಂಟ್ರೋಲ್ ಯೂನಿಟ್ ಅನ್ನು ಎರಡು ಬಾರಿ ನೆಲಕ್ಕೆ ಹಾಕಿ ಒಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು.
ಮತಗಟ್ಟೆ ಅಧಿಕಾರಿ ಎಂ.ಜಿ.ಕುಮಾರ ಅವರು ನೀಡಿದ ದೂರಿನ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತಗಟ್ಟೆಯಲ್ಲಿ 912 ಮತದಾರರು ಇದ್ದು, ಆ ವೇಳೆ 553 ಮಂದಿ ಮತ ಚಲಾಯಿಸಿದ್ದರು. ಹೊಸ ಕಂಟ್ರೋಲ್ ಯೂನಿಟ್ ಅಳವಡಿಸಿ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು ಎಂದು ಚುನಾವಣಾಧಿಕಾರಿ ತಿಳಿಸಿದರು.
ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ತಿಳಿಹೇಳಿದ್ದೆವು. ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ವಿಜಯನಗರ ಪೊಲೀಸರು ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.