ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಬ್ಯಾರಿಕೇಡ್ಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಉತ್ತರ ಸಂಚಾರಿ ಠಾಣೆಯ ಎಎಸ್ಐ ಉದಯ ದೊಡ್ಡಮನಿ ಹಾಗೂ ಸಶಸ್ತ್ರ ಮೀಸಲು ಪಡೆಯ ಮುತ್ತು ಮಾಗಿ ಅಮಾನತಾದ ಪೊಲೀಸರು.
ಹೋಳಿ ಹಬ್ಬದ ದಿನದಂದು ಭದ್ರತೆ ನೀಡುವ ನಿಟ್ಟಿನಲ್ಲಿ ವಾಣಿಜ್ಯ ನಗರಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಆ ದಿನ ಕರ್ತವ್ಯ ನಿರ್ವಹಣೆ ಬಳಿಕ ಮುತ್ತು ಮಾಗಿ, ಉದಯ ದೊಡ್ಡಮನಿ ಹೈವೇ ಪೆಟ್ರೋಲಿಂಗ್ ವಾಹನವನ್ನು ತೆಗೆದುಕೊಂಡು ನಗರದ ಹೊರವಲಯಕ್ಕೆ ತೆರಳಿದ್ದರು.ಈ ವೇಳೆ ವಾಹನ ಚಲಾಯಿಸುತ್ತಿದ್ದ ಮುತ್ತು ಮಾಗಿ ಕುಡಿದ ಮತ್ತಿನಲ್ಲಿ ವಾಹನವನ್ನು ಬ್ಯಾರಿಕೇಡ್ಗೆ ಗುದ್ದಿದ್ದ. ಇದರಿಂದ ಮುತ್ತುಮಾಗಿ ಮತ್ತು ಉದಯ್ ದೊಡ್ಡಮನಿ ಗಂಭೀರ ಗಾಯಗೊಂಡಿದ್ದರು.
ಘಟನೆಯ ಬಳಿಕ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು, ಈ ಇಬ್ಬರು ಪೊಲೀಸರು ಕರ್ತವ್ಯಲೋಪ ಎಸಗಿದ್ದು ಗೊತ್ತಾಗಿದೆ. ಇದರಿಂದಾಗಿ ಇಬ್ಬರನ್ನೂ ಅಮಾನತು ಮಾಡಿ ಹು-ಧಾ ಪೋಲಿಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.