ಮನೆ ಅಪರಾಧ ಕುಡಿದ ಮತ್ತಿನಲ್ಲಿ ಅಪಘಾತ: ಇಬ್ಬರು ಪೊಲೀಸರು ಅಮಾನತು

ಕುಡಿದ ಮತ್ತಿನಲ್ಲಿ ಅಪಘಾತ: ಇಬ್ಬರು ಪೊಲೀಸರು ಅಮಾನತು

0

ಹುಬ್ಬಳ್ಳಿ:  ಕುಡಿದ ಮತ್ತಿನಲ್ಲಿ ಬ್ಯಾರಿಕೇಡ್​ಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಉತ್ತರ ಸಂಚಾರಿ ಠಾಣೆಯ ಎಎಸ್​ಐ ಉದಯ ದೊಡ್ಡಮನಿ ಹಾಗೂ ಸಶಸ್ತ್ರ ಮೀಸಲು ಪಡೆಯ ಮುತ್ತು ಮಾಗಿ ಅಮಾನತಾದ ಪೊಲೀಸರು.

ಹೋಳಿ ಹಬ್ಬದ ದಿನದಂದು ಭದ್ರತೆ ನೀಡುವ ನಿಟ್ಟಿನಲ್ಲಿ ವಾಣಿಜ್ಯ ನಗರಿಯಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಆ ದಿನ ಕರ್ತವ್ಯ ನಿರ್ವಹಣೆ ಬಳಿಕ ಮುತ್ತು ಮಾಗಿ, ಉದಯ ದೊಡ್ಡಮನಿ ಹೈವೇ ಪೆಟ್ರೋಲಿಂಗ್ ವಾಹನವನ್ನು ತೆಗೆದುಕೊಂಡು ನಗರದ ಹೊರವಲಯಕ್ಕೆ ತೆರಳಿದ್ದರು.ಈ ವೇಳೆ ವಾಹನ ಚಲಾಯಿಸುತ್ತಿದ್ದ ಮುತ್ತು ಮಾಗಿ ಕುಡಿದ ಮತ್ತಿನಲ್ಲಿ ವಾಹನವನ್ನು ಬ್ಯಾರಿಕೇಡ್​ಗೆ ಗುದ್ದಿದ್ದ. ಇದರಿಂದ ಮುತ್ತುಮಾಗಿ ಮತ್ತು ಉದಯ್​ ದೊಡ್ಡಮನಿ ಗಂಭೀರ ಗಾಯಗೊಂಡಿದ್ದರು.

ಘಟನೆಯ ಬಳಿಕ ತನಿಖೆ ನಡೆಸಿದ ಪೊಲೀಸ್​ ಅಧಿಕಾರಿಗಳು, ಈ ಇಬ್ಬರು ಪೊಲೀಸರು ಕರ್ತವ್ಯಲೋಪ ಎಸಗಿದ್ದು ಗೊತ್ತಾಗಿದೆ. ಇದರಿಂದಾಗಿ ಇಬ್ಬರನ್ನೂ ಅಮಾನತು ಮಾಡಿ ಹು-ಧಾ ಪೋಲಿಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.