ಮನೆ ರಾಜ್ಯ ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಗೆಲುವು

ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಗೆಲುವು

0

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ.

ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ.  ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದರು.

2018ರಲ್ಲಿ ಸುಮಾರು 22 ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. 2013 ಹಾಗೂ 2008ರಲ್ಲಿ ಕಿಮ್ಮನೆ 2 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಇನ್ನು 1999ರಲ್ಲಿ 4 ಸಾವಿರ ಹಾಗೂ 2004ರಲ್ಲಿ ಒಂದೂವರೆ ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು.