ಮನೆ ರಾಜ್ಯ ಕ್ಷೇತ್ರಕ್ಕೆ ಕಾಲಿಡಲು ಅವಕಾಶವಿಲ್ಲದಿದ್ದರೂ ಗೆಲುವು ಸಾಧಿಸಿದ ವಿನಯ್ ಕುಲಕರ್ಣಿ

ಕ್ಷೇತ್ರಕ್ಕೆ ಕಾಲಿಡಲು ಅವಕಾಶವಿಲ್ಲದಿದ್ದರೂ ಗೆಲುವು ಸಾಧಿಸಿದ ವಿನಯ್ ಕುಲಕರ್ಣಿ

0

ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣ ಆರೋಪದಡಿ ಜಿಲ್ಲೆಯಿಂದ ಹೊರಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.

Join Our Whatsapp Group

ಬಿಜೆಪಿ ಹಾಲಿ ಶಾಸಕ ಅಮೃತ್​ ದೇಸಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಿನಯ್ ಪರ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಕುಟುಂಬಸ್ಥರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದರು. ಜೊತೆಗೆ ಕೆಪಿಸಿಸಿ ವಕ್ತಾರ ನಿಖೇತ್ ರಾಜ್ ಮೌರ್ಯ ಕೂಡ ವಿನಯ್ ಪರ ಎರಡು ದಿನ ಭರ್ಜರಿ ಪ್ರಚಾರ ನಡೆಸಿದ್ದರು.

ಇನ್ನು, ಕೊಲೆ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಪ್ರವೇಶಿಸಲು ವಿನಯ್ ಕುಲಕರ್ಣಿಗೆ ಕೋರ್ಟ್ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಹೊರಗಿದ್ದುಕೊಂಡೇ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸ್ಪರ್ಧಿಸಿದ್ದರು. ಅಂತೆಯೇ ವಿನಯ್ ಪರವಾಗಿ ಅವರ ಪತ್ನಿ ಮತ್ತು ಮಕ್ಕಳು ಪ್ರಚಾರ ನಡೆಸಿದ್ದರು.