ಬೆಂಗಳೂರು: ಜನರು ಪ್ರಬುದ್ಧರು ಎಂಬುದನ್ನು ಸಾಬೀತುಪಡಿಸಿದ್ದಾರೆ. ನಾವು ಯಾವತ್ತಿಗೂ ದ್ವೇಷ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ವಿಕ್ಟರಿ ಜನರ ವಿಕ್ಟರಿ. ಜನ ತಾವಾಗಿಯೇ ಎದ್ದು ಮತ ನೀಡಿದ್ದಾರೆ. ಕೆಟ್ಟ ಆಡಳಿತದ ವಿರುದ್ಧ ರೊಚ್ಚಿಗೆದ್ದು ಮತ ಹಾಕಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯದ ನಗೆ ಬೀರಿದೆ. ಪೂರ್ಣ ಬಹುಮತ ಸಾಧಿಸುವತ್ತ ಹೆಜ್ಜೆ ಹಾಕಿದ್ದು, ಚಿತ್ತಾಪೂರ ವಿಧಾನಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ.
13 ಸಾವಿರಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಜಯಶಾಲಿಯಾಗಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಒಳ್ಳೆ ಕೆಲಸ ಮಾಡಿದ್ರೆ ಜನರು ಒಳ್ಳೆಯವರ ಕೈ ಹಿಡಿಯುತ್ತಾರೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಡಜನ್ ಗಟ್ಟಲೆ ಸೆಂಟ್ರಲ್ ಮಿನಿಸ್ಟರ್’ಗಳು, ಪ್ರಧಾನಿ ಎಲ್ಲರೂ ಓಣಿ ಓಣಿ ಸುತ್ತಿದ್ದೇ ಬಂತು. ಮ್ಯಾನ್ ಪವರ್, ಮಸಲ್ ಪವರ್ ಯಾವುದಕ್ಕೂ ಜನ ಮೋಸ ಹೋಗಲಿಲ್ಲ. ಇದಕ್ಕೆ ಜನ ಬಲಿಯಾಗದೇ ನಮಗೆ ಮತ ಹಾಕಿದ್ದಾರೆ. ಒಳ್ಳೆ ಕೆಲಸ ಮಾಡಿದರೆ ಮತದಾರರು ಒಳ್ಳೆಯವರದ್ದೇ ಕೈ ಹಿಡಿತಾರೆ. ಸೋಲಲಿ, ಗೆಲ್ಲಲಿ ಜನರ ಮಧ್ಯೆ ಇರಬೇಕು. ಇದು ಕೇವಲ ಒಬ್ಬರ ಗೆಲುವಲ್ಲ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದಕ್ಕೆ ನಾವು ಗೆದ್ದಿದ್ದೇವೆ ಎಂದು ಖರ್ಗೆ ಗೆಲುವಿನ ಗುಟ್ಟನ್ನು ತಿಳಿಸಿದರು.
ಸಿಎಂ ಆಯ್ಕೆ ಬಗ್ಗೆ ಈಗೇನು ಮಾತಾಡಲ್ಲ. ಶಾಸಕಾಂಗ ಸಭೆ ಆದ ನಂತರ ಮಾತನಾಡುತ್ತೇನೆ. ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ. ಹೈಕಮಾಂಡ್ ಅನ್ನೋದು ಒಬ್ಬ ವ್ಯಕ್ತಿಯ ಮೇಲಿಲ್ಲ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಕುಳಿತು ಮಾತನಾಡುತ್ತೇವೆ. ಇವರೆಲ್ಲರ ನಿರ್ಧಾರದ ಮೇಲೆ ಸಿಎಂ ಆಯ್ಕೆ ಮಾಡುತ್ತೇವೆ. ಸಿಎಲ್’ಪಿ ಮೀಟಿಂಗ್ ಮಾಡುವವರೆಗೆ ಎಲ್ಲರೂ ಸಂಜೆ ಬರುವಂತೆ ಸೂಚನೆ ನೀಡಿದ್ದೇವೆ. ಮುಂದಿನ ಕೆಲಸಗಳ ಬಗ್ಗೆ ಅಲ್ಲಿ ತೀರ್ಮಾನ ಮಾಡ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ಕೆಲಸ ಮಾಡಿದೆ. ಗ್ಯಾರೆಂಟಿಗಳಿಗೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಯಾವುದಕ್ಕೂ ನಾನು ವ್ಯೆಯಕ್ತಿಕವಾಗಿ ಮೋದಿ ಬಗ್ಗೆ ಮಾತನಾಡಲ್ಲ. ವಿಷ ಸರ್ಪದ ವಿಚಾರಗಳನ್ನೆಲ್ಲ ಈಗ ಬಿಟ್ಟುಬಿಡಿ. ನಾವೂ ಮಾತನಾಡಿದೆವು, ಅವರೂ ಮಾತನಾಡಿದರು. ಗೆದ್ದ ಮೇಲೆ ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವುದು ಈಗ ನಮ್ಮ ಕೆಲಸ ಎಂದು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.