ಮನೆ ರಾಷ್ಟ್ರೀಯ ತಮಿಳುನಾಡಿನಲ್ಲಿ ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

0

ಚೆನ್ನೈ: ಚೆಂಗಲ್ಪಟ್ಟು ಮತ್ತು ವಿಲ್ಲುಪುರ ಜಿಲ್ಲೆಗಳಲ್ಲಿ ಸಂಭವಿಸಿದ ಕಳ್ಳಬಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

Join Our Whatsapp Group

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಿಳಿಸಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರವನ್ನೂ ಘೋಷಿಸಿದ್ದಾರೆ.

ಈ ಪ್ರಕರಣದಲ್ಲಿ ಅಮ್ರಾನ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

ಶನಿವಾರ ರಾತ್ರಿ ವಿಲ್ಲುಪುರ ಜಿಲ್ಲೆಯ ಮರಕ್ಕನಂ ತಾಲ್ಲೂಕಿನ ಇಕ್ಕಿಯಾಕುಪ್ಪಂನಲ್ಲಿ ಕಳ್ಳಬಟ್ಟಿ ಕುಡಿದು ಮಹಿಳೆ ಸಹಿತ ಐವರು ಮೃತಪಟ್ಟಿದ್ದರು. ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮೃತರು 45–55 ವರ್ಷ ವಯಸ್ಸಿನವರಾಗಿದ್ದಾರೆ.