ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ವೆಬ್ ಸೈಟ್ ಹ್ಯಾಕ್ ಮಾಡಿ ಹಣ ದೋಚುತ್ತಿದ್ದ ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ದಿಲೀಪ್ ರಾಜೇಗೌಡ ಬಂಧಿತ ಆರೋಪಿ.
ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು.
ಆದಾಯ ತೆರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್ ಹಣವನ್ನು ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.
ಆದಾಯ ತೆರಿಗೆ ಇಲಾಖೆಗೆ ತೆರಿಗೆ ಕಟ್ಟಿದವರ, ರಿಫಂಡ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದನು. ನಂತರ ತೆರಿಗೆದಾರರ ಹೆಸರಲ್ಲಿ ಬೇರೆ ಬ್ಯಾಂಕ್ ಖಾತೆ ತೆರೆದು ನಕಲಿ ದಾಖಲೆಗಳ ಸಹಿತ, ಕೆವೈಸಿ ಕೂಡ ಸೃಷ್ಟಿ ಮಾಡುತ್ತಿದ್ದನು. ನಂತರ ಆದಾಯ ತೆರಿಗೆ ಇಲಾಖೆ ರಿಫಂಡ್ ಮಾಡಿದ ಹಣವನ್ನು ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದನು. ಹೀಗೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ. ಕರ್ನಾಟಕ ಸರ್ಕಾರದ ಕಾವೇರಿ ಆನ್ಲೈನ್ ಪೋರ್ಟಲ್ ನಲ್ಲಿ (ಆಸ್ತಿಗಳನ್ನು ರಿಜಿಸ್ಟರ್ ಮಾಡಲು ಬಳಸುವ ವೆಬ್ ಪೋರ್ಟಲ್) ಅನ್ನು ಕೂಡ ಹ್ಯಾಕ್ ಮಾಡಲು ಯತ್ನಿಸಿದ್ದಾನೆ. ಸದ್ಯ ಅರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.