ಮನೆ ಅಪರಾಧ ವಿಕೋಪಕ್ಕೆ ತಿರುಗಿದ ವಾಗ್ವಾದ: ಗುಂಡಿನ ದಾಳಿಗೆ ಓರ್ವ ಬಲಿ

ವಿಕೋಪಕ್ಕೆ ತಿರುಗಿದ ವಾಗ್ವಾದ: ಗುಂಡಿನ ದಾಳಿಗೆ ಓರ್ವ ಬಲಿ

0

ಇಡುಕ್ಕಿಕೇರಳದ ಇಡುಕ್ಕಿ ಜಿಲ್ಲೆಯ ಮೂಲಮಟ್ಟಂ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 32 ವರ್ಷದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. 

ಮೃತಪಟ್ಟ ವ್ಯಕ್ತಿಯನ್ನು ಕೀರಿತೋಡಿನ ಬಸ್ ಚಾಲಕ ಸೋನಾಲ್ ಸಾಬು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆತನ ಸ್ನೇಹಿತ ಪ್ರದೀಪ್ ಮತ್ತು ಮೂಲಮಟ್ಟಂನ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೊಡುಪುಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ರಾತ್ರಿ ಹೊಟೇಲ್‌ನಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ವಿಕೋಪಕ್ಕೆ ತಿರುಗಿತ್ತು. ಆಗ ಫಿಲಿಪ್ ಮತೀನ್ ಎಂಬ ವ್ಯಕ್ತಿ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಓರ್ವ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಫಿಲಿಪ್  ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.