ಮನೆ ರಾಜಕೀಯ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ: ಕೆ.ಎನ್.ರಾಜಣ್ಣ

ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ: ಕೆ.ಎನ್.ರಾಜಣ್ಣ

0

ತುಮಕೂರು: ಕಗ್ಗಂಟು ಇಲ್ಲ, ಯಾವ ಗಂಟು ಇಲ್ಲ, ಎಲ್ಲಾ ಸರಾಗವಾಗಿದೆ. ಇದೇ 18 ಕ್ಕೆ ಪ್ರಮಾಣ ವಚನವಾಗಬಹುದು. ನನಗೆ ವಿಶ್ವಾಸ ಇದೆ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಮಧುಗಿರಿ ನೂತನ ಶಾಸಕ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

Join Our Whatsapp Group

ತುಮಕೂರಿನಲ್ಲಿ ಸಚಿವ ಸಂಪುಟ ರಚನೆ ವಿಚಾರ ಕುರಿತು ಅವರು, ಹೈಕಮಾಂಡ್ ಒಲವು ಕೂಡ ಅವರ ಪರವಾಗಿದೆ. ಎಲ್ಲರನ್ನ ಕರೆಸಿ ವಿಶ್ವಾಸ ತೆಗೆದುಕೊಂಡು ಸಮಾನಕರವಾದ ಘಟ್ಟ ತರಬೇಕೆಂಬ ಪ್ರಯತ್ನ ಅಷ್ಟೇ. ಶಿವಕುಮಾರ್ ಕೂಡ ಸಹಕಾರ ಕೊಡ್ತಾರೆಂಬ ವಿಶ್ವಾಸ ಇದೆ. ಜೊತೆಗೆ ಸಿಎಂ ವಿಚಾರ ಇಂದು(ಮೇ.16) ಪೈನಲ್ ಆಗಲೇಬೇಕು ಎಂದರು.

ಸಚಿವ ಸಂಪುಟ ಸ್ವಲ್ಪ ತಡವಾಗಬಹುದು. ಸದ್ಯಕ್ಕೆ ಸಿದ್ದರಾಮಯ್ಯ ಒಬ್ಬರೆ ಪ್ರಮಾಣ ವಚನ ಮಾಡಲಿದ್ದು, ಮೊದಲ ದಿನವೇ ಕ್ಯಾಬಿನೆಟ್ ಮಾಡಿ, 10 ಕೆಜಿ ಅಕ್ಕಿ ಘೋಷಣೆ ಮಾಡುವ ಮೂಲಕ ಅನ್ನಭಾಗ್ಯ ಯೋಜನೆ ಜಾರಿಗೆ ತರೋದೆ ಮೊದಲ ತಿರ್ಮಾನ. ನಾನು ಸಚಿವ ಆಗಲೇಬೇಕು ಅದು ಸಹಕಾರ ಸಚಿವ ಸ್ಥಾನವೇ ಬೇಕು. ಅದು ಬಿಟ್ಟು ಬೇರೆ ಏನು ಕೇಳಲ್ಲ ಎಂದರು.

ಮಧುಗಿರಿ ಜಿಲ್ಲೆ ಮಾಡಲು ಪ್ರಯತ್ನ ಮಾಡಲಾಗುವುದು. ನಾನು ಹೇಳಿದಂತೆ ನಡೆಯುವವ ಮಧುಗಿರಿ ಜಿಲ್ಲೆ ಆಗಲಿದೆ ಎಂದರು.