ಮನೆ ರಾಜಕೀಯ ಚಾಮರಾಜನಗರ: ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಸೋಮಣ್ಣ ಬೆಂಬಲಿಗರ ಆಕ್ರೋಶ

ಚಾಮರಾಜನಗರ: ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಸೋಮಣ್ಣ ಬೆಂಬಲಿಗರ ಆಕ್ರೋಶ

0

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಜತೆ ಇಂದು ವಿ. ಸೋಮಣ್ಣ ಕೃತಜ್ಞತಾ ಸಭೆ ನಡೆಸಿದ್ದು, ಈ ವೇಳೆ ಸೋಮಣ್ಣ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

Join Our Whatsapp Group

ಸೋಮಣ್ಣ ಬೆಂಬಲಿಗರು ಜಿಲ್ಲಾ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ಜಿಲ್ಲಾ ಬಿಜೆಪಿ ಏನು ಕೆಲಸ ಮಾಡಿಲ್ಲ. ಸೋಮಣ್ಣ ಅವರನ್ನು ಬೇಕು ಅಂತ ಸೋಲಿಸಿದ್ದಾರೆ ಎಂದು ಸಭೆಯಲ್ಲಿ ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಜಿಲ್ಲಾಧ್ಯಕ್ಷ

ಚಾಮರಾಜನಗರದಿಂದ ವಿ ಸೋಮಣ್ಣ ಸ್ಪರ್ಧಿಸುವುದು ಬಹುತೇಕ ಫಿಕ್ಸ್​​​ ಆದಾಗ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಸೋಮಣ್ಣ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಪಕ್ಷದ ಕಾರ್ಯಕರ್ತರಿಗೆ ಸಹಕಾರ ನೀಡಿಲ್ಲ. ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದಾದ ಬಳಿಕ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ವಿ ಸೋಮಣ್ಣ ಪರ ರುದ್ರೇಶ್​​ ಕೆಲಸ ಮಾಡಿಲ್ಲ ಎಂದು ವಿ ಸೋಮಣ್ಣ ಬೆಂಬಲಿಗರು ಆರೋಪ ಮಾಡುತ್ತಿದ್ದಾರೆ.