ಇಂದೋರ್: ಮದುವೆ ಸಮಾರಂಭದಲ್ಲಿ ತಾಳಿ ಕಟ್ಟಲು ಕೆಲವು ನಿಮಿಷ ಇರುವಾಗಲೇ ವಧು – ವರ ವಿಷ ಸೇವಿಸಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಮಂಗಳವಾರ( ಮೇ.16 ರಂದು) ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ವಧು ವರರ ನಡುವೆ ವಾಗ್ವಾದ ಉಂಟಾಗಿದೆ. ಇನ್ನೇನು ಹಾರ ಬದಲಾಯಿಸಿ ತಾಳಿ ಕಟ್ಟಬೇಕು ಎನ್ನುವಾಗಲೇ ವರ ಮದುವೆ ವೇದಿಕೆಯ ಬದಿಗೆ ಹೋಗಿದ್ದಾನೆ. ಆ ಬಳಿಕ ಮದುವೆ ವೇದಿಕೆಯಲ್ಲಿ ತಾನು ವಿಷ ಸೇವಿಸಿ ಬಂದಿದ್ದೇನೆ ಎಂದು ವರ ದೀಪಕ್ ಅಹಿರ್ವಾರ್ ವಧು ನಿಶಾಳಿಗೆ ಹೇಳಿದ್ದಾನೆ. ವರನ ಮಾತನ್ನು ಕೇಳಿ ವಧು ಕೂಡ ವಿಷ ಸೇವಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿ ಇಬ್ಬರನ್ನೂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವರ ಮೃತಪಟ್ಟಿದ್ದು, ವಧು ಜೀವನ್ಮರಣದ ಹೋರಾಟ ಮಾಡುತ್ತಿದ್ದಾಳೆ. ಆಕೆಯನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದೆ ಎಂದು ವರದಿ ತಿಳಿಸಿದೆ.
ಯುವತಿ ಮದುವೆಯಾಗಲು ಒತ್ತಡ ಹೇರುತ್ತಿದ್ದಳು. ನಮ್ಮ ಹುಡುಗನಿಗೆ ಇನ್ನು ಚಿಕ್ಕ ವಯಸ್ಸು ಆತ ಸ್ವಲ್ಪ ಕೆರಿಯರ್ ಬಿಲ್ಡ್ ಮಾಡಿಕೊಳ್ಳಬೇಕೆಂದು ಹೇಳಿ, ಎರಡು ವರ್ಷದ ಸಮಯ ಕೇಳಿದ್ದ. ಆದರೆ ಇದಕ್ಕೆ ಆಕೆ ಒಪ್ಪದೆ ಹುಡುಗನ ವಿರುದ್ಧ ದೂರು ನೀಡಿದ್ದಳು. ಇದೇ ಕಾರಣದಿಂದ ಮದುವೆ ಬೇಗ ಮಾಡಲು ತೀರ್ಮಾನ ಮಾಡಿದ್ದೆವು ಎಂದು ವರನ ಕುಟುಂಬ ಸದಸ್ಯರು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.