ಮನೆ ಅಪರಾಧ ತೀರ್ಥಹಳ್ಳಿ: ಬೆಳ್ಳಂಬೆಳಗ್ಗೆ ಇಬ್ಬರು ಕೂಲಿ ಕಾರ್ಮಿಕರ ಹತ್ಯೆ

ತೀರ್ಥಹಳ್ಳಿ: ಬೆಳ್ಳಂಬೆಳಗ್ಗೆ ಇಬ್ಬರು ಕೂಲಿ ಕಾರ್ಮಿಕರ ಹತ್ಯೆ

0

ತೀರ್ಥಹಳ್ಳಿ: ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ಸಮೀಪದ ವಿಶ್ವಕರ್ಮ ಸಮುದಾಯ ಭವನದೊಳಗೆ ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ ಇಂದು ನಡೆದಿದೆ.

Join Our Whatsapp Group

ಮಂಜಪ್ಪ (45) ಬೀರಪ್ಪ (46) ಹತ್ಯೆಗೀಡಾದ ಕಾರ್ಮಿಕರು.

ದಾವಣಗೆರೆ ಮೂಲದ ಕಾರ್ಮಿಕರು ಎನ್ನಲಾಗುತ್ತಿದ್ದು, ರಾತ್ರಿ ಕುಡಿದು ಹಣದ ವ್ಯವಹಾರದಲ್ಲಿ ಈ ಹತ್ಯೆಯ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.

ಸಮುದಾಯ ಭವನದ ಕೆಲಸಕ್ಕೆ ಬಂದಿದ್ದ ಕಾರ್ಮಿಕರ ಮೇಲೆ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬರಬೇಕಿದೆ.