ಮನೆ ಅಪರಾಧ ಪತಿ ಹತ್ಯೆಗೈದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ, ಆಕೆಯ ಪ್ರಿಯಕರನ ಬಂಧನ

ಪತಿ ಹತ್ಯೆಗೈದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ, ಆಕೆಯ ಪ್ರಿಯಕರನ ಬಂಧನ

0

ಮಹದೇವಪುರ: ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಮಮತಾ ಹಾಗೂ ಹರೀಶ್‌ ಬಂಧಿತರು. ಆನಂದ್‌ ಕೊಲೆಯಾದವ.

ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸ್ನಾನದ ಕೋಣೆಯಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್‌ ಶವ ಪತ್ತೆಯಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ವೇಳೆ ಪತ್ನಿ ಸುಳ್ಳು ಹೇಳಿರುವುದು ಗೊತ್ತಾಗಿದೆ.

ಪ್ರಿಯಕರ ಹರೀಶ್‌ ಜತೆ ಜೀವನ ಮಾಡಲು ಇಷ್ಟ ಪಟ್ಟಿದ್ದ ಮಮತಾ ಆತನೊಂದಿಗೆ ಸೇರಿ ಗಂಡ ಆನಂದ್‌ ನ ಹತ್ಯೆಗೆ ಸಂಚು ರೂಪಿಸಿದ್ದಳು. ಅದರಂತೆ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಆನಂದ್‌ ಗೆ ಕೊಟ್ಟಿದ್ದಳು. ಆನಂದ್‌ ನಿದ್ದೆಗೆ ಜಾರಿದ ಬಳಿಕ ಪ್ರಿಯಕರನ ಜತೆಗೆ ಸೇರಿಕೊಂಡು ರೈಲ್ವೆ ಹಳಿ ಮೇಲೆ ಆನಂದ್‌ ದೇಹ ಇರಿಸುವ ಸಂಚು ರೂಪಿಸಿದ್ದರು. ಆದರೆ, ಆ ವ್ಯಕ್ತಿ ಹೆಚ್ಚು ತೂಕವಿದ್ದ ಹಿನ್ನೆಲೆಯಲ್ಲಿ ಆತನನ್ನು ಸಾಗಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಉಸಿರುಗಟ್ಟಿಸಿ ಆತನನ್ನು ಹತ್ಯೆ ಮಾಡಿದ್ದರು. ಬಳಿಕ ಮೃತದೇಹವನ್ನು ಸ್ನಾನದ ಕೋಣೆಯಲ್ಲಿ ಇರಿಸಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದಂತೆ ಬಿಂಬಿಸಿದ್ದರು.

ಬಳಿಕ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದರು. ಇತ್ತ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆನಂದ್‌ ಗೆ ನಿದ್ರೆ ಮಾತ್ರೆ ನೀಡಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದಿರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಅನಿತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.