ಬೆಂಗಳೂರು:16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು.
ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಉಪ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕರಿಸಿದರು. ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ಮೊದಲ ಅಧಿವೇಶನ ಇದಾಗಿದೆ.
ಸದನದಿಂದ ಸಭಾಧ್ಯಕ್ಷರು ಆಯ್ಕೆ ಆಗುವವರೆಗೆ ವಿಧಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ದೇಶಪಾಂಡೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.