‘ವರನಟ’ ಡಾ ರಾಜ್ಕುಮಾರ್ ಮತ್ತು ತೆಲುಗು ನಟ, ಮಾಜಿ ಸಿಎಂ ಎನ್ ಟಿ ರಾಮಾರಾವ್ ಕುಟುಂಬಗಳ ನಡುವೆ ಉತ್ತಮ ಒಡನಾಟ ಆಗಿನಿಂದಲೂ ಇದೆ. ಶಿವರಾಜ್ಕುಮಾರ್, ನಂದಮೂರಿ ಬಾಲಕೃಷ್ಣ ಕೂಡ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಪೂರ್ಣಪ್ರಮಾಣದ ಬಿಗ್ ಬಜೆಟ್ ಸಿನಿಮಾವೊಂದರಲ್ಲಿ ಶಿವಣ್ಣ ಮತ್ತು ಬಾಲಯ್ಯ ತೆರೆಹಂಚಿಕೊಳ್ಳುವುದು ಖಚಿತವಾಗಿದೆ.
ತೆಲುಗು ಚಿತ್ರರಂಗದ ಲೆಜೆಂಡರಿ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಟಿಆರ್ ಅವರ ಶತಮಾನೋತ್ಸವ ಸಮಾರಂಭವು ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಈ ಸಮಾರಂಭಕ್ಕೆ ಶಿವರಾಜ್ ಕುಮಾರ್ ಅವರು ಕೂಡ ಅತಿಥಿಯಾಗಿ ಭಾಗಿಯಾಗಿದ್ದರು.
ವೇದಿಕೆ ಸೀನಿಯರ್ ಎನ್ ಟಿಆರ್ ಅವರ ಜತೆಗಿನ ಒಡನಾಟವನ್ನು ನೆನಪು ಮಾಡಿಕೊಂಡಿದ್ದಾರೆ. ಚೆನ್ನೈನಲ್ಲಿ ಇದ್ದ ದಿನಗಳಲ್ಲಿ ಶಿವರಾಜ್ಕುಮಾರ್ ಅವರು ಎನ್ ಟಿಆರ್ ಅವರ ಮನೆಯ ಮುಂದಿನಿಂದಲೇ ಪ್ರತಿದಿನ ಕಾಲೇಜಿಗೆ ಹೋಗುತ್ತಿದ್ದರಂತೆ. ಅದನ್ನೆಲ್ಲ ಶಿವಣ್ಣ ಹೇಳಿಕೊಂಡಿದ್ದಾರೆ. ಇದೇ ವೇಳೆ ನಂದಮೂರಿ ಬಾಲಕೃಷ್ಣ ಅವರ ನೂರನೇ ಸಿನಿಮಾ ‘ಗೌತಮಿ ಪುತ್ರ ಶಾತಕರ್ಣಿ’ಯಲ್ಲಿ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಹಾಗೆಯೇ ಮಾತನಾಡುತ್ತ ಬಾಲಯ್ಯ ಜತೆಗಿನ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.
‘ನನ್ನ ತಂದೆ ಡಾ ರಾಜ್ಕುಮಾರ್ ಅವರು ಕನ್ನಡದ ನಟ. ಎನ್ ಟಿಆರ್ ಅವರು ತೆಲುಗು ನಟ. ಪ್ರತಿದಿನ ಈ ಇಬ್ಬರು ಕಲಾವಿದರನ್ನು ನೋಡಲು ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದ ಚೆನ್ನೈಗೆ ಸಾಕಷ್ಟು ಅಭಿಮಾನಿಗಳು ಬರುತ್ತಿದ್ದರು. ನಾವು ಯಾವಾಗಲೂ ನಮ್ಮ ತಂದೆಯನ್ನು ಎನ್ಟಿಆರ್ ಅವರ ಕಿರಿಯ ಸಹೋದರ ಎಂದು ಭಾವಿಸುತ್ತಿದ್ದೆವು’ ಎಂದು ಹೇಳಿದ ಶಿವರಾಜ್ಕುಮಾರ್ ಅವರು, ‘ನಾನು ಮತ್ತು ಬಾಲಯ್ಯ ಒಂದು ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಈ ಮಾತನ್ನು ಕೇಳುತ್ತಿದ್ದಂತೆಯೇ, ಅಲ್ಲಿ ನೆರೆದಿದ್ದ ಸಾವಿರಾರು ಮಂದಿ ಹರ್ಷೋದ್ಘಾರ ವ್ಯಕ್ತಪಡಿಸಿದರು.
ಸದ್ಯಕ್ಕೆ ಶಿವರಾಜ್ ಕುಮಾರ್ ಮತ್ತು ನಂದಮೂರಿ ಬಾಲಕೃಷ್ಣ ಕಾಂಬಿನೇಷನ್ ನ ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅತ್ತ NBK108 ಸಿನಿಮಾದ ಶೂಟಿಂಗ್ ನಲ್ಲಿ ಬಾಲಯ್ಯ ಬ್ಯುಸಿ ಇದ್ದಾರೆ. ಈ ಮಧ್ಯೆ ಶಿವಣ್ಣ ಕೂಡ ಒಂದಾದ ಮೇಲೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ‘ಕರಟಕ ದಮನಕ’, ‘ಘೋಸ್ಟ್’ ಸಿನಿಮಾಗಳ ಬಹುತೇಕ ಶೂಟಿಂಗ್ ಮುಗಿಸಿರುವ ಅವರು, ಅರ್ಜುನ್ ಜನ್ಯ ಅವರ ’45’ ಶೂಟಿಂಗ್ ಆರಂಭಿಸಬೇಕಿದೆ.
ಇದರ ಜತೆಗೆ ತಮಿಳಿನಲ್ಲಿ ‘ಜೈಲರ್’ ಮತ್ತು ‘ಕ್ಯಾಪ್ಟನ್ ಮಿಲ್ಲರ್’ ಚಿತ್ರೀಕರಣದಲ್ಲೂ ಭಾಗಿಯಾಗಿದ್ದಾರೆ. ‘ಸತ್ಯಮಂಗಲ’, ‘ಅಶ್ವತ್ಥಾಮ’ ಸಿನಿಮಾಗಳು ಘೋಷಣೆ ಆಗಿವೆ. ತಮ್ಮದೇ ಬ್ಯಾನರ್ನಲ್ಲಿ ‘ಬೈರತಿ ರಣಗಲ್’ ಸಿನಿಮಾವನ್ನು ಶಿವರಾಜ್ ಕುಮಾರ್ ಘೋಷಿಸಿದ್ದಾರೆ. ಅದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.