ಮನೆ ರಾಜ್ಯ ಸರ್ಕಾರಿ ಬಸ್- ಲಾರಿ ನಡುವೆ ಅಪಘಾತ: ಇಬ್ಬರ ಸಾವು

ಸರ್ಕಾರಿ ಬಸ್- ಲಾರಿ ನಡುವೆ ಅಪಘಾತ: ಇಬ್ಬರ ಸಾವು

0

ಬಳ್ಳಾರಿ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಚಾಲಕರು ಮೃತಪಟ್ಟ ಘಟನೆ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

Join Our Whatsapp Group

ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ ಗೆ ದಾಖಲಿಸಲಾಗಿದೆ.

ಗದಗದಲ್ಲಿ ಬೈಕ್ ಅಪಘಾತ: ಬೈಕ್​ ನಿಯಂತ್ರಣ ತಪ್ಪಿ ರಭಸವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ‌ ನಡೆದಿತ್ತು.

ಶ್ರೀಧರ ಗಡಗಿ (15) ಹಾಗೂ ಅನುಪಕುಮಾರ ಇಟಗಿ (16) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿದ್ದ ಸವಾರ್ ಮೌನೇಶ ಎಂಬಾತನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಅಬ್ಬಿಗೇರಿ ಗ್ರಾಮದಿಂದ ರೋಣ ಪಟ್ಟಣಕ್ಕೆ ಒಂದೇ ಬೈಕ್ ​ನಲ್ಲಿ ಮೂವರು ಸವಾರರು ತೆರಳುತ್ತಿದರು. ಮಾರ್ಗ‌ ಮಧ್ಯೆ ನಿಯಂತ್ರಣಕ್ಕೆ ಸಿಗದ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರೋಣ ಪೊಲೀಸ್ ಠಾಣೆ ವ್ಯಾಪ್ತಿ ಈ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.