ಮೈಸೂರು: ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆಯ ಅಂಗವಾಗಿ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಹಂಚ್ಯಾ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿ ಡಾ. ಪ್ರವೀಣ್ ಕುಲಕರ್ಣಿ, ಉಪ ಪ್ರಾಂಶುಪಾಲರು (ಪ್ಯಾರಾ ಕ್ಲಿನಿಕಲ್) ಗೌರವ ಅತಿಥಿಗಳು ಡಾ. ಸುನಿಲ್ ಕುಮಾರ್ ಡಿ, ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಹಂಚ್ಯಾ ಪಿ ಎಚ್ ಸಿ ವೈದ್ಯಾಧಿಕಾರಿ ಡಾ. ರವೀಂದ್ರ ಅವರು ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು.
ಅಧಿಕ ರಕ್ತದೊತ್ತಡದ ಲಕ್ಷಣಗಳು ಮತ್ತು ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸಲು ಮೊದಲನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಜಾತಾವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಬಿಪಿ ಮಾಪನ, ರಕ್ತದಲ್ಲಿನ ಸಕ್ಕರೆ ಮತ್ತು ಹಿಮೋಗ್ಲೋಬಿನ್ ಅಂದಾಜು ಪರೀಕ್ಷೆ ಮಾಡಲಾಯಿತು. ಎಲ್ಲಾ ಫಲಾನುಭವಿಗಳಿಗೆ ಸಲಹೆ ಮತ್ತು ಆರೋಗ್ಯ ಶಿಕ್ಷಣವನ್ನು ಕೂಡ ನೀಡಲಾಯಿತು.
ಸುಮಾರು 50 ಜನರು ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘಟಕರಾದ ಡಾ. ಅಮೋಘ ಶ್ರೀ, ಸಹಾಯಕ ಪ್ರಾಧ್ಯಾಪಕಿ ಮತ್ತು ಡಾ. ರಶ್ಮಿ ಎಸ್, ಸೀನಿಯರ್ ರೆಸಿಡೆಂಟ್, ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಿಬ್ಬಂದಿಗಳು, ಸ್ನಾತಕೋತರ ಪದವೀಧರರು, ವೈದ್ಯಕೀಯ ಸಾಮಾಜಿಕ ಕಾರ್ಯಕರ್ತರು, ಹಂಚ್ಯಾ ಪಿಎಚ್ ಸಿಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.