ಮನೆ ಅಪರಾಧ 25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ: ಕೇರಳ ಮೂಲದ ಮೂವರ ಬಂಧನ

25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ: ಕೇರಳ ಮೂಲದ ಮೂವರ ಬಂಧನ

0

ಮೈಸೂರು: ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ.

Join Our Whatsapp Group

ಖಚಿತ ಮಾಹಿತಿ ಮೇರೆಗೆ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳು ಕೇರಳದಿಂದ ಈ ವಸ್ತುವನ್ನು ಮೈಸೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ್ದರು.

ಇವರನ್ನು ಹಿಡಿಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ಅವರಿಗೆ ತಂಡದ ನೇತೃತ್ವ ನೀಡಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ನಿಂತಿದ್ದ ಪೊಲೀಸರು, ಅಂಬರ್ ಗ್ರೀಸ್ ತುಂಬಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಕಾರು ಬಂದ ಕೂಡಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರಲ್ಲದೆ ಸುಮಾರು ಒಂಭತ್ತೂವರೆ ಕೆಜಿಯಷ್ಟು, ಅಂದಾಜು 25 ಕೋಟಿ ರೂ.ಗಳಷ್ಟು ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರೆಂದು ಹೇಳಲಾಗಿದೆ. ಆರೋಪಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಂಬರ್ ಗ್ರೀಸ್ ಗೆ ವಿದೇಶದಲ್ಲೂ ಅಪಾರವಾದ ಬೇಡಿಕೆ ಮತ್ತು ಅಧಿಕ ಬೆಲೆ ಕೂಡ ಇದೆ.