ಮನೆ ಅಪರಾಧ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸಾವು, ಓರ್ವನ ಬಂಧನ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸಾವು, ಓರ್ವನ ಬಂಧನ

0

ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಸಾಮೂಹಿಕ ಅತ್ಯಾಚಾಕ್ಕೆ ಒಳಗಾಗಿದ್ದ ಮಹಿಳೆ  ಸಾವನ್ನಪ್ಪಿರುವ ಘಟನೆ ಮೇ 23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Join Our Whatsapp Group

ನಾಲ್ಕು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ.

ತಾಡಪತ್ರಿ ಹೊಲೆದು ಜೀವನ ನಡೆಸುತ್ತಿದ್ದ ಗೃಹಿಣಿಯನ್ನು ಒತ್ತಾಯಪೂರ್ವಕವಾಗಿ ಆರೋಪಿ ಮಲ್ಲಪ್ಪ ಗುಂಡಪ್ಪ ಹಾಗೂ ಆತನ ಮೂವರು ಸಹಚರರು‌ ಸೇರಿಕೊಂಡು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಡಪತ್ರಿ ಹೊಲೆಸಿಕೊಂಡು ಬರಲು ಹೋಗುವ ನೆಪದಲ್ಲಿ ಗೃಹಿಣಿ ಜೊತೆ ಆರೋಪಿಗಳು ಸಲುಗೆ ಬೆಳೆಸಿಕೊಂಡಿದ್ದರು. ಇದಾದ ಬಳಿಕ ಹಲವು ಬಾರಿ ಆಕೆಯ ಜೊತೆಗೆ ದೈಹಿಕ ಸಂಪರ್ಕಕ್ಕಾಗಿ ಒತ್ತಾಯಿಸಿದ್ದರು. ಇದನ್ನು ಗೃಹಿಣಿ ವಿರೋಧಿಸಿದ್ದಳು. ಆದರೆ, ಮೇ 23 ರಂದು ಆರೋಪಿ ಮಲ್ಲಪ್ಪ ಬೈಕ್​ ನಲ್ಲಿ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದ.

ಮಹಿಳೆಯನ್ನು ಕರೆದೊಯ್ದ ಆರೋಪಿಗಳು ಗ್ರಾಮದ ಕಾಲುವೆ ಬಳಿ ಸಾಮೂಹಿಕ ಅತ್ಯಾಚಾರ ಮಾಡಿ ಬಿಟ್ಟು ಹೋಗಿದ್ದರು. ಇದನ್ನು ಗ್ರಾಮದ ವ್ಯಕ್ತಿಯೊಬ್ಬರು ಕಂಡು ಮಹಿಳೆಯ ಪುತ್ರನಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕಾಗಮಿಸಿದ ಕುಟುಂಬಸ್ಥರು, ಮಹಿಳೆಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೇ 24 ರಂದು ಮಹಿಳೆ ಮೃತಪಟ್ಟಿದ್ದಾಳೆ.

ಸಾವಿಗೂ ಮೊದಲು ಸಂತ್ರಸ್ತ ಮಹಿಳೆ ಆರೋಪಿಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ತನ್ನನ್ನು ಆರೋಪಿ ಮಲ್ಲಪ್ಪ ಸೇರಿದಂತೆ ಮೂವರು ಬಲವಂತವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿಸಿದ್ದರು.

ಮಹಿಳೆ ನೀಡಿದ ಹೇಳಿಕೆಯ ಮೇರೆಗೆ ಪುತ್ರ ಸಿಂಧನೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾನೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಲ್ವರು ಆರೋಪಿಗಳಲ್ಲಿ ಎ1 ಆರೋಪಿ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು, ನಾಪತ್ತೆಯಾದ ಇನ್ನೂ ಮೂವರಿಗಾಗಿ ಬಲೆ ಬೀಸಿದ್ದಾರೆ.