ಬೆಂಗಳೂರು: ಒಬ್ಬ ಕಾಂಗ್ರೆಸ್ ನಾಯಕ ಹಾಗೂ 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಇಂದು ಮಧ್ಯಾಹ್ನ ಖಾತೆ ಹಂಚಿಕೆ ಮಾಡಿದ್ದಾರೆ.
ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಹಣಕಾಸು, ವಾರ್ತಾ ಮತ್ತು ಪ್ರಸಾರ, ಗುಪ್ತಚರ ಉಳಿಸಿಕೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಬೇಡಿಕೆಯಂತೆ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.
ಯಾರಿಗೆ ಯಾವ ಖಾತೆ?
ಸಿದ್ದರಾಮಯ್ಯ– ಮುಖ್ಯಮಂತ್ರಿ, ಹಣಕಾಸು, ವಾರ್ತಾ ಮತ್ತು ಗುಪ್ತಚರ
ಡಿ.ಕೆ ಶಿವಕುಮಾರ್– ಜಲಸಂಪನ್ಮೂಲ ಹಾಗೂ ಬೆಂಗಳೂರು ನಗಾರಾಭಿವೃದ್ಧಿ
ಕೆ.ಎಚ್ ಮುನಿಯಪ್ಪ– ಆಹಾರ ಮತ್ತು ನಾಗರಿಕ ಪೂರೈಕೆ
ಸತೀಶ್ ಜಾರಕಿಹೊಳಿ– ಲೋಕೋಪಯೋಗಿ
ಎಂ.ಬಿ ಪಾಟೀಲ್– ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿಬಿಟಿ
ಪ್ರಿಯಾಂಕ್ ಖರ್ಗೆ– ಗ್ರಾಮೀಣಾಭಿವೃದ್ಧಿ
ಜಿ.ಪರಮೇಶ್ವರ್– ಗೃಹ ಇಲಾಖೆ
ಕೆ.ಜೆ ಜಾರ್ಜ್– ಇಂಧನ
ರಾಮಲಿಂಗಾರೆಡ್ಡಿ– ಸಾರಿಗೆ ಇಲಾಖೆ
ಜಮೀರ್ ಅಹಮದ್ ಖಾನ್– ವಸತಿ, ವಕ್ಫ್
ಎಚ್.ಕೆ.ಪಾಟೀಲ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ
ಕೃಷ್ಣ ಬೈರೇಗೌಡ- ಕಂದಾಯ
ಎನ್.ಚಲುವರಾಯಸ್ವಾಮಿ- ಕೃಷಿ
ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ
ಡಾ.ಎಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ
ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಇಲಾಖೆ
ಕೆ.ಎನ್.ರಾಜಣ್ಣ; ಸಹಕಾರ
ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ
ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ
ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್.ಮಲ್ಲಿಕಾರ್ಜುನ- ತೋಟಗಾರಿಕೆ
ಶಿವರಾಜ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ’
ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ
ಮಂಕಾಳ ಸುಬ್ಬ ವೈದ್ಯ -ಮೀನುಗಾರಿಕೆ, ಬಂದರು ಮತ್ತು ಒಳನಾಡು
ಲಕ್ಷ್ಮಿ ಹೆಬ್ಬಾಳಕರ- ಮಹಿಳಾ ಮತ್ತು ಮಕ್ಕಳ ಕಲ್ಯಾಣ
ರಹೀಂ ಖಾನ್- ಪೌರಾಡಳಿ ಮತ್ತು ಹಜ್
ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ದಿ ಮತ್ತು ಯೋಜನೆ, ಸಾಂಖ್ಯಿಕ
ಸಂತೋಷ್ ಎಸ್.ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ದಿ
ಎನ್.ಎಸ್.ಬೋಸರಾಜು- ಪ್ರವಾಸೋಧ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಬೈರತಿ ಸುರೇಶ್ -ಬೆಂಗಳೂರು ಹೊರತುಪಡಿಸಿ ನಗಾರಾಭಿವೃದ್ಧಿ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಡಾ.ಎಂ.ಸಿ.ಸುಧಾಕರ್- ವೈದ್ಯಕೀಯ ಶಿಕ್ಷಣ
ಬಿ.ನಾಗೇಂದ್ರ- ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.