ಚಿತ್ರದುರ್ಗ: ಮಠ ಮತ್ತು ಎಸ್’ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಇತ್ಯರ್ಥವಾಗುವವರೆಗೆ ತಾತ್ಕಾಲಿಕ ಆಡಳಿತ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ ಸಮಿತಿಯನ್ನು ರಚನೆ ಮಾಡಲಾಗಿತ್ತು.
ಇದರಂತೆ ಸಮಿತಿಯು ನಿನ್ನೆ ಸಭೆ ನಡೆಸಿದ್ದು, ಸಭೆಯಲ್ಲಿ ಬಸವಪ್ರಭು ಸ್ವಾಮೀಜಿ ಅವರನ್ನು ಮಠದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಯಿತು. ಇದೇ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ಮಾಡಲು ಕೂಡ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಇದಲ್ಲದೆ, ಆಡಳಿತ ಸಮಿತಿಯ ಸ್ವರೂಪ ಹಾಗೂ ಪದಾಧಿಕಾರಿಗಳ ಹೆಸರನ್ನು ಶೀಘ್ರವೇ ಹೈಕೋರ್ಟ್ ಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಮಠದ ಉಸ್ತುವಾರಿಯನ್ನು ಕಾನೂನು ಬದ್ಧವಾಗಿ ಬಸವಪ್ರಭು ಸ್ವಾಮೀಜಿ ಅವರಿಗೆ ನೀಡಿದ್ದರು. ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದರಿಂದ ಸ್ವಾಮೀಜಿ ಧಾರ್ಮಿಕ ಕೈಂಕರ್ಯಗಳಿಗೆ ಸೀಮಿತವಾಗಿದ್ದರು.
ಶಾಸಕ ವೀರೇಂದ್ರ ಕೆ.ಸಿ, ಹನುಮಲಿ ಷಣ್ಮುಖಪ್ಪ ಸೇರಿದಂತೆ ಲಿಂಗಾಯತ ಸಮಾಜದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.