ಹೊಸದಿಲ್ಲಿ: ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಅವರು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ತಮ್ಮ ಗಮನ ಸೆಳೆದಿದ್ದಾರೆಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
2023ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಸಾಲಿನಲ್ಲಿ ರಾಜಸ್ಥಾನ್ ರಾಯಲ್ಸ್ ಆರಂಭಿಕ ಯಶಸ್ವಿ ಜೈಸ್ವಾಲ್ ಕೂಡ ಇದ್ದಾರೆ. ಆಡಿದ 14 ಪಂದ್ಯಗಳಿಂದ ಜೈಸ್ವಾಲ್ 48.08ರ ಸರಾಸರಿಯಲ್ಲಿ 625 ರನ್ ಗಳನ್ನು ಸಿಡಿಸಿದ್ದಾರೆ. ಇದರಲ್ಲಿ ಅವರು ಒಂದು ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ಗಳ ಸಾಲಿನಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.
ಒಂದು ಕಡೆ ಸ್ಟಾರ್ ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, ಮತ್ತೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದರಲ್ಲೂ ವಿಶೇಷವಾಗಿ ಪವರ್ಪ್ಲೇನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪೈಕಿ ಇವರು ಕೂಡ ಒಬ್ಬರಾಗಿದ್ದಾರೆ.
ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಅವರು ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಪ್ರದರ್ಶನವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಈ ಆವೃತ್ತಿಯಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ನೆಚ್ಚಿನ ಆಟಗಾರ ಎಂದು ಆರ್ಸಿಬಿ ದಿಗ್ಗಜ ಜಿಯೋ ಸಿನಿಮಾ ಚರ್ಚೆಯಲ್ಲಿ ಹೇಳಿಕೊಂಡಿದ್ದಾರೆ.
“ನನ್ನ ಪ್ರಕಾರ ಯಶಸ್ವಿ ಜೈಸ್ವಾಲ್ ದೊಡ್ಡ ಆಟಗಾರ. ಈ ಬಗ್ಗೆ ನನಗೆ ಖಚಿತತೆ ಇದೆ. ಈತನಿನ್ನೂ ಯುವ ಬ್ಯಾಟ್ಸ್ ಮನ್ ಆಗಿದ್ದು, ಎಲ್ಲಾ ಶಾಟ್ಸ್ ಹೊಂದಿದ್ದಾರೆ. ಕ್ರೀಸ್ ನಲ್ಲಿ ಯಾವಾಗಲೂ ಶಾಂತ ಸ್ವಭಾವವನ್ನು ಕಾಪಾಡಿಕೊಳ್ಳುವ ಇವರು, ಪವರ್ಪ್ಲೇನಲ್ಲಿ ಎದುರಾಳಿ ಬೌಲರ್ಗಳ ವಿರುದ್ಧ ಪ್ರಾಬಲ್ಯ ಸಾಧಿಸುತ್ತಾರೆ. ಇದರ ನಡುವೆ ಅವರು ತಮ್ಮ ಬ್ಯಾಟಿಂಗ್ ನಲ್ಲಿ ತುಂಬಾ ನಿಯಂತ್ರಣವನ್ನು ಸಾಧಿಸಿದ್ದಾರೆ,” ಎಂದು ಎಬಿ ಡಿ ವಿಲಿಯರ್ಸ್ ಶ್ಲಾಘಿಸಿದ್ದಾರೆ.
16 ಪಂದ್ಯಗಳಿಂದ ಮೂರು ಶತಕ ಹಾಗೂ ನಾಲ್ಕು ಅರ್ಧಶತಕಗಳೊಂದಿಗೆ 851 ರನ್ ಗಳಿಸಿ 2023ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಸಾಲಿನಲ್ಲಿ ಅಗ್ರ ಸ್ಥಾನ ಅಲಂಕರಿಸಿರುವ ಶುಭಮನ್ ಗಿಲ್ ಅವರ ಬಗ್ಗೆಯೂ ಎಬಿ ಡಿ ವಿಲಿಯರ್ಸ್ ಈ ವೇಳೆ ಮಾತನಾಡಿದ್ದಾರೆ.
“ಶುಭಮನ್ ಗಿಲ್ ಸ್ವಲ್ಪ ವಯಸಾದವರು. ಹಾಗಾಗಿ ಯಶಸ್ವಿ ಜೈಸ್ವಾಲ್ ಗೆ ದೀರ್ಘಾವಧಿ ಅವಕಾಶಗಳನ್ನು ನೀಡಬೇಕು. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಆಗುವ ಸಾಮರ್ಥ್ಯ ಯಶಸ್ವಿ ಜೈಸ್ವಾಲ್ ಗೆ ಇದೆ,” ಎಂದಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.