ಮನೆ ರಾಷ್ಟ್ರೀಯ ಟಿ.ನರಸೀಪುರ ಅಪಘಾತ: ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯದಿಂದ ತಲಾ 2 ಲಕ್ಷ ರೂ....

ಟಿ.ನರಸೀಪುರ ಅಪಘಾತ: ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯದಿಂದ ತಲಾ 2 ಲಕ್ಷ ರೂ. ಪರಿಹಾರ

0

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ ಪರಿಹಾರ ಘೋಷಣೆ ಮಾಡಿದೆ.

Join Our Whatsapp Group

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ.

ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಪ್ರಧಾನಿ ನರೇಂದ್ರ ಮೋದಿ “ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಅಗಲಿದ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್​ ಮಾಡಿದ್ದಾರೆ.

ತಲಾ 2 ಲಕ್ಷ ಪರಿಹಾರ ಘೋಷಿಸಿದ್ದ ಸಿಎಂ ಸಿದ್ದರಾಮಯ್ಯ

ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದರು.

ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದರು.

ಘಟನೆ ವಿವರ

ನಿನ್ನೆ (ಮೇ.29) ರಂದು ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ-ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದರು. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದರು. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದರು. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.