ಸಾಲ ಮಾಡಿ ವಾಹನಗಳನ್ನು ಖರೀದಿಸಿದ ಮಾಲೀಕರು ಸುಸ್ತಿದಾರರಾಗಿದ್ದ ವೇಳೆ ಸಾಲ ವಸೂಲಾತಿ ಏಜೆಂಟ್ ಗಳು ಗೂಂಡಾಗಳ ಮೂಲಕ ಬಲವಂತವಾಗಿ ವಾಹನಗಳನ್ನು ಜಪ್ತಿ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಬಲವಂತವಾಗಿ ಸುಸ್ತಿದಾರರ ವಾಹನಗಳನ್ನು ಕಿತ್ತುಕೊಳ್ಳುವುದು ಸಂವಿಧಾನದ ವಿಧಿ 21 ಖಾತರಿಪಡಿಸಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ. ಒಂದು ವೇಳೆ ಬಲವಂತವಾಗಿ ವಾಹನಗಳನ್ನು ಕಿತ್ತುಕೊಂಡಲ್ಲಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಬಹುದಾಗಿದೆ ಎಂದು ಪಾಟ್ನಾ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಅಕ್ರಮವಾಗಿ ವಾಹನಗಳನ್ನು ಜಪ್ತಿ ಮಾಡುತ್ತಿರುವ ಹಣಕಾಸು ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ರಾಜೀವ್ ರಂಜನ್ ಪ್ರಸಾದ್ ಅವರಿದ್ದ ಪೀಠ, ಹಣಕಾಸು ಸಂಸ್ಥೆಗಳ ಹಾಗೂ ಬ್ಯಾಂಕ್ ಗಳು ವಾಹನಗಳ ಸಾಲ ವಸೂಲಾತಿಯನ್ನು ಆರ್.ಬಿಐ ಮಾರ್ಗಸೂಚಿ ಮತ್ತು ಇತರೆ ಕಾನೂನಿನ ಅನುಸಾರ ಮಾಡಬೇಕೇ ವಿನಃ ಬಲವಂತದ ಕ್ರಮವಾಗಿರಬಾರದು. ವಸೂಲಿ ಕ್ರಮ ಕೈಗೊಳ್ಳುವಾಗ ಸಂವಿಧಾನ ಖಾತರಿಪಡಿಸಿರುವ ಜೀವನೋಪಾಯದ ಹಕ್ಕಿನ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ.
ಇದೇ ವೇಳೆ ಕಿರುಕುಳ ನೀಡಿ ವಾಹನ ಕಿತ್ತುಕೊಂಡ ಪ್ರಕರಣಗಳಲ್ಲಿ ಪ್ರತಿವಾದಿಗಳಾಗಿರುವ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಹೈಕೋರ್ಟ್ ತಲಾ 50 ಸಾವಿರ ದಂಡ ವಿಧಿಸಿದೆ. ಅಲ್ಲದೇ ಸಾಲವನ್ನು ಬಲವಂತವಾಗಿ ಗೂಂಡಾಗಳ ಮೂಲಕ ವಸೂಲಿ ಮಾಡುವ ಕ್ರಮ ಕೈಬಿಟ್ಟು ಕಾನೂನು ಪ್ರಕಾರ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಆದೇಶಿಸಿದೆ. ಅಂತಿಮವಾಗಿ ಬಲವಂತವಾಗಿ ವಾಹನ ಜಪ್ತಿ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ಬಲವಂತದ ಜಪ್ತಿ ತಡೆಗಟ್ಟಲು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.