ಮನೆ ರಾಜಕೀಯ ಕಷ್ಟ ಕಾಲದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರನ್ನು ಕಾಂಗ್ರೆಸ್ ಕೈ ಬಿಡುವುದಿಲ್ಲ: ಡಿ.ಕೆ.ಶಿವಕುಮಾರ್

ಕಷ್ಟ ಕಾಲದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರನ್ನು ಕಾಂಗ್ರೆಸ್ ಕೈ ಬಿಡುವುದಿಲ್ಲ: ಡಿ.ಕೆ.ಶಿವಕುಮಾರ್

0

ಬೆಳಗಾವಿ: ಯಾವ ನಾಯಕರು ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೋ ಅಂತಹ ನಾಯಕರನ್ನು ಕಾಂಗ್ರೆಸ್ ಎಂದಿಗೂ ಕೈಬಿಡುವುದಿಲ್ಲ. ಪಕ್ಷ ಅವರ ಜೊತೆಗೆ ಸದಾ ನಿಲ್ಲುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಭಯ ನೀಡಿದರು.

Join Our Whatsapp Group

ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಕಷ್ಟ ಕಾಲದಲ್ಲಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷಕ್ಕೆ ಬಂದು, ನಮಗೆ ಶಕ್ತಿ ತುಂಬಿದ್ದಾರೆ. ಚುನಾವಣೆ ಮುಗಿದ ಮೇಲೆ ಅವರ ಜೊತೆಗೆ ಮಾತನಾಡಲು ನನಗೆ ಸಮಯವೇ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಅವರ ಭೇಟಿಗೆ ಬಂದಿದ್ದೇನೆ ಎಂದರು.

ಸವದಿ ಮತ್ತು ಶೆಟ್ಟರ ನಾಯಕರು ಕಾರ್ಯಕರ್ತರಲ್ಲ. ಪಕ್ಷಕ್ಕೆ ಕಷ್ಟ ಕಾಲದಲ್ಲಿ ಶಕ್ತಿ ತುಂಬಿದ್ದಾರೆ. ಹೀಗಿರುವಾಗ ನಾವು ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು  ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬೇಸರ ಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಾರಿಗೂ ಬೇಸರವಿಲ್ಲ.ಲಕ್ಷ್ಮಣ ಸವದಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು ಎಂಬ ವಿಚಾರ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಯಾರನ್ನೂ ಕೈ ಬಿಡುವುದಿಲ್ಲ ಅಷ್ಟು ಮಾತ್ರ ಹೇಳುತ್ತೇನೆ ಎಂದರು.