ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ.
ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಇಂದು(ಮೇ 31) ಕೆಎಸ್ ಆರ್ ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ ಆರ್ ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಬೇಸಿಗೆ ರಜೆ ಅಂತ್ಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಿವೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚನೆಗಳನ್ನು ನೀಡಿದೆ. ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ.
ಒಂದು ವೇಳೆ ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.