ಮನೆ ಕಾನೂನು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪ: ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪ: ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

0

ಶಿವಮೊಗ್ಗ: ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪದಡಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

Join Our Whatsapp Group

ಶಿವಮೊಗ್ಗ ಶರಾವತಿ ನಗರ, ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ದಾಳಿ ನಡೆಸಿದೆ.

ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಮನೆ ಹಾಗೂ ತೋಟದ ಮನೆ ಮೇಲೆ ರೇಡ್ ಮಾಡಿದೆ.

ಇತ್ತ ಶಿಕಾರಿಪುರದಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಜಿಲ್ಲಾ ಪಂಚಾಯಿತಿ ಇಂಜಿನಿಯರ್​ ಶಂಕರ್​ ನಾಯ್ಕ್​ ಶಿಕಾರಿಪುರದ  ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಹನೂರುನಲ್ಲಿ ಲೋಕಾ ದಾಳಿ:

ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದ ಹೊರವಲಯದ ತೋಟದ ಜಮೀನೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಅಜ್ಜೀಪುರ ಗ್ರಾಮದ ಶಿವಶಂಕರ್ ಮೂರ್ತಿ ಎಂಬುವವರು ಹಾಲಿ ನಂಜನಗೂಡು ಪಟ್ಟಣದಲ್ಲಿ ಹಿರಿಯ ಉಪನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಇಂದು ಹಲವಾರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ಶಿವಶಂಕರ್ ಮೂರ್ತಿ ಅವರಿಗೆ ಸೇರಿರುವ ಅಜ್ಜೀಪುರ ಗ್ರಾಮದ ತೋಟದ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ತಂಡ ಒಂದು ಕಾರಿನಲ್ಲಿ ಆಗಮಿಸಿ ದಾಳಿ ನಡೆಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.