ಮನೆ ರಾಜಕೀಯ ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ನೀಡಿದ ರಾಜೀನಾಮೆ ಅಂಗೀಕಾರ

ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ನೀಡಿದ ರಾಜೀನಾಮೆ ಅಂಗೀಕಾರ

0

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಗುರುವಾರ  ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.

ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಅವರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್​.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಜೆಡಿಎಸ್​ನಲ್ಲಿ ಸಿಗಲಿರುವ ಸ್ಥಾನಮಾನಗಳ ಬಗ್ಗೆ ಈವರೆಗೆ ಇಬ್ರಾಹಿಂ ಅವರಿಗೆ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ.

ಮತ್ತೊಂದೆಡೆ ಇಬ್ರಾಹಿಂ ಮನವೊಲಿಸಲು ಕಾಂಗ್ರೆಸ್​ನ ಹಿರಿಯ ನಾಯಕರು ಯತ್ನಿಸಿದ್ದರು. ಸಿದ್ದರಾಮಯ್ಯ, ಹಾಗೂ ಅವರ ಆಪ್ತ ಎಚ್‌.ಸಿ.ಮಹದೇವಪ್ಪ ಸಹ ಸಂಧಾನಕ್ಕಾಗಿ ಪ್ರಯತ್ನಿಸಿದ್ದರು. ಆದರೆ ಅದು ಫಲ ನೀಡಿರಲಿಲ್ಲ.

ಜೆಡಿಎಸ್ ಸೇರ್ಪಡೆಯ ಒಲವು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ 19ರಂದು ಇಬ್ರಾಹಿಂ ಅವರೊಂದಿಗೆ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದರು.