ಮನೆ ಸುದ್ದಿ ಜಾಲ ರಾಜ್ಯದಲ್ಲಿ ಕೋಮುವಾದಕ್ಕೆ ಅವಕಾಶ ನೀಡಬಾರದು: ಕಿರಣ್ ಮಜುಂದಾರ್ ಶಾ

ರಾಜ್ಯದಲ್ಲಿ ಕೋಮುವಾದಕ್ಕೆ ಅವಕಾಶ ನೀಡಬಾರದು: ಕಿರಣ್ ಮಜುಂದಾರ್ ಶಾ

0

ಬೆಂಗಳೂರು: ಎಲ್ಲ ಸಮುದಾಯದವರನ್ನೂ ಒಳಗೊಂಡಿರುವ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕವು ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು ಎಂದು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಆತಂಕ ವ್ಯಕ್ತಪಡಿಸಿದ್ದಾರೆ.

ಐಟಿಬಿಟಿ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಮಾಡಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಅವರು, ಬಸವರಾಜ ಬೊಮ್ಮಾಯಿಯವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ ಎಂದು ಒತ್ತಾಯಿಸಿದ್ದಾರೆ.

ಹಲಾಲ್‌ ಕುರಿತು ವ್ಯಕ್ತಿಯೊಬ್ಬರ ಕಮೆಂಟ್‌ಗೆ ಪ್ರತಿಕ್ರಿಯಿಸಿರುವ ಶಾ, ‘ಗಲ್ಫ್ ರಾಷ್ಟ್ರಗಳಿಗೆ ಮಾಂಸವನ್ನು ರಫ್ತು ಮಾಡಲು ಹಲಾಲ್‌ನ ಪ್ರಮಾಣ ಪತ್ರದ ಅವಶ್ಯಕತೆ ಇದೆ. ಆದರಿಂದ, ರಫ್ತು ಮಾಡುವುದನ್ನೇ ಬಿಡಿ ಎಂದು ಹೇಳಿದ್ದಾರೆ.