ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆ ಶಿಸ್ತು, ಬದ್ಧತೆ, ಕರ್ತವ್ಯ ನಿಷ್ಠೆಗೆ ಹೆಸರು ವಾಸಿ. ಇಲಾಖೆಯಿಂದ ಸಲ್ಯೂಟ್ ಸಿಗುತ್ತೆ, ಲಾಠಿ ಚಾರ್ಜ್ ಒದೆಯೂ ಸಿಗುತ್ತೆ. ಗುಂಡು ಹಾರಿಸುವುದಕ್ಕೂ ರೆಡಿ. ಯಾರಿಗೆ ಯಾವುದು ಬೇಕೋ ಅದನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕವಾಗಿ ತಿಳಿಸಿದರು.
ವಿಧಾನಸೌಧದಲ್ಲಿ ಕಚೇರಿ ಕೊಠಡಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಪರಿಶುದ್ಧ ಆಡಳಿತ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅದೇ ಕಿವಿಮಾತು ಹೇಳಿದ್ದಾರೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮವಹಿಸಲಾಗುವುದು. ಪಕ್ಷದ ಚುನಾವಣಾ ಪ್ರಣಾಳಿಕೆ ಸ್ಪಷ್ಟವಾಗಿದೆ. ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಅಂತಹ ಸಂಘಟನೆಗಳನ್ನು ನಿಷೇಧಿಸುವ ವಿಷಯವೂ ಪ್ರಸ್ತಾಪಿಸಿದ್ದು, ರಾಜ್ಯದಲ್ಲಿ ಅಂತಹ ಪ್ರಮೇಯ ಬರಲಾರದು ಎಂಬ ವಿಶ್ವಾಸವಿದೆ. ಬರಬಾರದು ಎಂದು ಆಶಿಸುವುದಾಗಿ ಹೇಳಿದರು.
ಪಿಎಸ್ಐ ನೇಮಕ ಅಕ್ರಮ ಪ್ರಕರಣವು ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿದ್ದು, ಅಗತ್ಯ ಕಾನೂನು ಕ್ರಮಗಳ ಕುರಿತು ಅಡ್ವೋಕೇಟ್ ಜನರಲ್ ಜತೆಗೆ ಚರ್ಚಿಸಲಾಗುವುದು. ಜತೆಗೆ ತಪ್ಪಿತಸ್ಥರ ವಿರುದ್ಧ ತಕ್ಕ ಕಾನೂನು ಕ್ರಮವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವೆಂದು ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.