ಮನೆ ರಾಜಕೀಯ ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಿ: ಸಿಎಂ

ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಿ: ಸಿಎಂ

0

ಬೆಂಗಳೂರು: ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ. ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಉದ್ಯಮಿ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಮವಸ್ತ್ರದ ವಿಷಯ ಈಗಾಗಲೇ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ತಮ್ಮ ತಮ್ಮ ನಂಬಿಕೆಗಳ ಆಧಾರದ ಮೇಲೆ ಇಷ್ಟು ವರ್ಷ ನಾವೆಲ್ಲರೂ ಬದುಕು ನಡೆಸುತ್ತಿದ್ದೇವೆ. ಕರ್ನಾಟಕ ರಾಜ್ಯ ಶಾಂತಿಗೆ ಮತ್ತು ಪ್ರಗತಿಗೆ ಹೆಸರಾಗಿದೆ. ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಸಂಯಮ ವಹಿಸಬೇಕು. ಸಾಮಾಜಿಕವಾಗಿ ಹಲವಾರು ಸಮಸ್ಯೆಗಳು ಉದ್ಭವವಾಗುವ ಸಂದರ್ಭದಲ್ಲಿ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.