ಭಾರತದಲ್ಲಿರುವ ಕೆಲವೇ ಕೆಲವು ಪ್ರಾಚೀನ ಗುಹಾಂತರ ದೇವಾಲಯಗಳಲ್ಲಿ ಬೆಂಗಳೂರು ಕೆಂಪೇಗೌಡನಗರ (ಗವಿಪುರಂ ಗುಟ್ಟಹಳ್ಳಿ) ದಲ್ಲಿರುವ ಶ್ರೀಗವಿಗಂಗಾಧರೇಶ್ವರ ಸ್ವಾಮಿ ದೇವಾಲಯವೂ ಒಂದು. ಪ್ರಾಚೀನ ಕಾಲದಲ್ಲಿ ಈ ಗುಹಾಂತರ ದೇವಾಲಯದಲ್ಲಿ ಗೌತಮ ಮಹರ್ಷಿಗಳು ತಪವನ್ನಾಚರಿಸಿದ್ದರು. ಇಲ್ಲಿರುವ ಶಿವಲಿಂಗಕ್ಕೆ ತ್ರಿಕಾಲ ಪೂಜೆ ಸಲ್ಲಿಸುತ್ತಿದ್ದರು ಎಂದು ಸ್ಥಳ ಪುರಾಣ ಸಾರುತ್ತದೆ. ಹೀಗಾಗೇ ಇದಕ್ಕೆ ಗೌತಮ ಕ್ಷೇತ್ರ ಎಂದೂ ಹೆಸರು ಬಂದಿದೆ.
ಭಾರದ್ವಾಜ ಮುನಿಗಳು ಕೂಡ ಈ ಗುಹೆಯಲ್ಲಿ ತಪವನ್ನಾಚರಿಸಿದ್ದರು ಎಂಬ ಐತಿಹ್ಯಕ್ಕೆ ಪೂರಕವಾಗಿ ಈ ದೇವಾಲಯ ಗರ್ಭಗುಡಿಯ ಸುತ್ತ ಇರುವ ಗುಹಾ ಮಾರ್ಗದಲ್ಲಿ ಗೌತಮ ಮಹರ್ಷಿಗಳ ಹಾಗೂ ಭಾರದ್ವಾಜರ ಶಿಲಾಮೂರ್ತಿಗಳನ್ನೂ ಪ್ರತಿಷ್ಠಾಪಿಸಲಾಗಿದೆ. ಇದೇ ಮಾರ್ಗದಲ್ಲಿ ಸಪ್ತ ಮಾತೃಕೆಯರಾದ ಬ್ರಾಹ್ಮೀ, ಮಾಹೇಶ್ವರಿ, ವಾರಾಹಿ, ಚಾಮುಂಡಿ, ವೈಷ್ಣವಿ ಹಾಗೂ ಶ್ರೀದೇವಿ, ಭೂದೇವಿಯ ವಿಗ್ರಹಗಳೂ ಇವೆ.
ಅತ್ಯಂತ ಸುಂದರ ಹಾಗೂ ರಮಣೀಯವಾದ ಈ ದೇವಾಲಯದ ಮುಂಭಾಗದಲ್ಲಿ ವಿಜಯನಗರ ಶೈಲಿಯ ೧೪ ಕಂಬಗಳಿರುವ ಮಂಟಪವಿದೆ. ಈ ದೇವಾಲಯದ ವಿಶಾಲ ಪ್ರಾಂಗಣದಲ್ಲಿ ಬಹಳ ಅಪರೂಪವಾದ ಹಾಗೂ ಅತ್ಯಂತ ಸುಂದರವಾದ ಶಿಲಾರಚನೆಗಳಿವೆ. ಈ ಪೈಕಿ ಎರಡು ಸೂರ್ಯಪಾನ, ಡಮರುಗ ಹಾಗೂ ತ್ರಿಶೂಲದ ಎತ್ತರದ ಸ್ತಂಭಗಳು ಈ ದೇವಾಲಯದ ಕೀರ್ತಿಗೆ ಕಳಶದಂತಿವೆ. ಇವುಗಳನ್ನು ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ಕಟ್ಟಿದರೆಂದು ತಿಳಿದುಬಂದಿದೆ.
ಈ ಗುಹಾಂತರ ದೇವಾಲಯದಲ್ಲಿ ಎರಡು ಸುರಂಗ ಮಾರ್ಗಗಳಿದ್ದು, ಒಂದು ಸುರಂಗವು ತುಮಕೂರು ರಸ್ತೆಯಲ್ಲಿರುವ ಶಿವಗಂಗೆಗೂ ಮತ್ತೊಂದು ವಿಶ್ವನಾಥನ ನೆಲೆವೀಡಾದ ಕಾಶಿಗೂ ಹೋಗುತ್ತದೆಂಬುದು ನಂಬಿಕೆ.
ವಿಶೇಷ: ಈ ಪ್ರಾಚೀನ ದೇವಾಲಯದ ವಾಸ್ತು ವಿನ್ಯಾಸ ಅತ್ಯಂತ ಮನಮೋಹಕವಾಗಿದ್ದು, ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಪ್ರತಿವರ್ಷ ಮಕರ ಸಂಕ್ರಾತಿಯ ದಿನ ಸಂಜೆ ಸೂರ್ಯನ ಕಿರಣಗಳು ಲಿಂಗದ ಮುಂದಿರುವ ನಂದಿಯ ಕೊಂಬಿನಿಂದ ಹಾದು, ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಈ ವಿಸ್ಮಯವನ್ನು ಕಾಣಲು ಅಂದು ಇಲ್ಲಿ ಜನಜಾತ್ರೆಯೇ ಸೇರುತ್ತದೆ. ಕಾರ್ತೀಕ ಮಾಸದ ಎಲ್ಲ ಸೋಮವಾರ ಹಾಗೂ ಶಿವರಾತ್ರಿಯ ದಿನ ಇಲ್ಲಿ ವಿಶೇಷ ಪೂಜೆಗಳು ಜರುಗುತ್ತವೆ. ದೇವಾಲಯದ ಪಕ್ಕದಲ್ಲೇ ಇರುವ ತಿಮ್ಮೇಶಪ್ರಭು ಉದ್ಯಾನದಲ್ಲಿ ಸಂಗೀತ, ನೃತ್ಯ ಕಾರಂಜಿಯೂ ಇದೆ. ಪ್ರತಿ ಭಾನುವಾರ ಸಂಜೆ ೭ರ ನಂತರ ಇಲ್ಲಿ ನೃತ್ಯಕಾರಂಜಿಯ ವೈಭವ ಕಣ್ತುಂಬಿಕೊಳ್ಳಬಹುದು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.